ಡಿವೈಎಸ್ಪಿ ನಾಗೇಶ್ಮಾತನಾಡಿ, ‘ನಗರದಲ್ಲಿ ಗಾಂಜಾ ಮಾರಾಟ ಜಾಲ ಸೇರಿದಂತೆ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದನವಾಜ್, ಒಮ್ಮೆ ಜೈಲಿಗೆ ಹೋಗಿ ಬಂದಿದ್ದ. ಸ್ನೇಹಿತನ ಬಳಿ ಸುಮಾರು ₹ 1 ಲಕ್ಷಕ್ಕೂ ಹೆಚ್ಚು ಸಾಲ ಪಡೆದಿದ್ದ. ಹಣ ಹಿಂದಿರುಗಿಸಲು ಸತಾಯಿಸುತ್ತಿದ್ದ. ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ಹೋಗಿದ್ದ ಸಂದರ್ಭದಲ್ಲಿ ಹತ್ಯೆಯಾಗಿದೆ. ತನಿಖೆ ಚುರುಕುಗೊಳಿಸಿದ್ದು,ಸದ್ಯದಲ್ಲೇ ಕೊಲೆ ಆರೋಪಿಗಳನ್ನು ಬಂಧಿಸಲಾಗುವುದು’ ಎಂದರು.