‘ಹಾಸನ ನಗರ ಸೇರಿದಂತೆ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತೆ ಕಾರ್ಯ ನಿರ್ಲಕ್ಷ್ಯಕ್ಕೀಡಾಗುತ್ತಿದೆ. ನಗರದ ರಸ್ತೆ ಬದಿಗಳಲ್ಲಿ ಹಾಗೂ ಖಾಲಿ ನಿವೇಶನಗಳಲ್ಲಿ ಮತ್ತು ಹೊಸ ಬಡಾವಣೆಗಳಲ್ಲಿ ಪಾರ್ಥೇನಿಯಂ ಬೆಳೆದು ನಿಂತಿವೆ. ಕಸ ಸರಿಯಾಗಿ ವಿಲೇವಾರಿ ಮಾಡದ ಕಾರಣ ಸಾಂಕ್ರಾಮಿಕ ರೋಗ ಹರಡುವ ಭೀತಿ ಎದುರಾಗಿದ್ದು, ಕೂಡಲೇ ಸ್ಥಳೀಯ ಸಂಸ್ಥೆಗಳು ಸಂಬಂಧಪಟ್ಟ ಮಾಲೀಕರಿಗೆ ಸೂಚನೆ ನೀಡಿ. ಸ್ವಚ್ಛ ಮಾಡದ ಮಾಲೀಕರಿಗೆ ದಂಡ ವಿಧಿಸಬೇಕು’ ಎಂದು ಒತ್ತಾಯಿಸಿದರು.