<p><strong>ಹಾಸನ: ‘</strong>ಆರ್ಎಸ್ಎಸ್ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ, ಬುದ್ಧಿ ಕಲಿಸಲು ಉಪಚುನಾವಣೆಯಲ್ಲಿ ಮತದಾರರು ಜೆಡಿಎಸ್ಗೆ ಮತ ಹಾಕಿಲ್ಲ’ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.</p>.<p>ಸಿಂದಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಕಳಪೆ ಪ್ರದರ್ಶನ ತೋರಿಸಿದೆ. ಗೆಲುವು ಸಾಧಿಸಿದ್ದ ಕ್ಷೇತ್ರದಲ್ಲಿ ಐದು ಸಾವಿರ ಮತಗಳು ಬಿದ್ದಿಲ್ಲ. ಜೆಡಿಎಸ್ ಅನ್ನು ಯಾರು ಮುಗಿಸುತ್ತಿದ್ದಾರೋ ಗೊತ್ತಿಲ್ಲ, ಆದರೆ, ಅವರ ತಪ್ಪಿನಿಂದ ಪಕ್ಷ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂಬ ಜನಾಭಿಪ್ರಾಯವಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರು, ಸಂಸದರು ತೆರಳಿ ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಜೆಡಿಎಸ್ ಪಡೆದಿರುವ ಮತಗಳು ಪಕ್ಷದ ಸ್ಥಿತಿಯನ್ನು ಹೇಳುತ್ತದೆ.ಜೆಡಿಎಸ್ ಪಡೆದ ಐದು ಸಾವಿರ ಮತಗಳಿಂದ ಕಾಂಗ್ರೆಸ್ಗಾಗಲಿ, ಬಿಜೆಪಿಗಾಗಲಿ ಏನುಉಪಯೋಗವಾಗುತ್ತದೆ ಎಂದು ಅರ್ಥ ಮಾಡಿಕೊಳ್ಳಬೇಕು. ಜೆಡಿಎಸ್ ಸ್ಪರ್ಧೆಯಿಂದ ಬಿಜೆಪಿಗೆಲಾಭವಾಗುತ್ತದೆ ಎಂಬ ಕಾಂಗ್ರೆಸ್ಆರೋಪದಲ್ಲಿಯಾವುದೇ ಹುರುಳಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ದೇಶ ಪ್ರೇಮ ಸಂಘಟನೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾರಣ ಜೆಡಿಎಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಣ್ಣ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಅವರು ಆರ್ಎಸ್ಎಸ್ ಸಂಘಟನೆ ಬಗ್ಗೆ ಟೀಕಿಸಿರುವುದು ಸರಿಯಲ್ಲ. ಚುನಾವಣೆ ಮುಗಿದಿರುವುದರಿಂದ ಈಗ ಆರ್ಎಸ್ಎಸ್ ಹೋರಾಟ, ಸೇವೆ, ಪರಿಶ್ರಮದ ಬಗ್ಗೆ ಚರ್ಚೆ ಮಾಡಿ ಸತ್ಯ ತಿಳಿದುಕೊಳ್ಳಲಿ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: ‘</strong>ಆರ್ಎಸ್ಎಸ್ ಬಗ್ಗೆ ಹಗುರವಾಗಿ ಮಾತನಾಡಿದ ಕಾರಣ, ಬುದ್ಧಿ ಕಲಿಸಲು ಉಪಚುನಾವಣೆಯಲ್ಲಿ ಮತದಾರರು ಜೆಡಿಎಸ್ಗೆ ಮತ ಹಾಕಿಲ್ಲ’ ಎಂದು ಶಾಸಕ ಪ್ರೀತಂ ಗೌಡ ಹೇಳಿದರು.</p>.<p>ಸಿಂದಗಿ, ಹಾನಗಲ್ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಜೆಡಿಎಸ್ ಕಳಪೆ ಪ್ರದರ್ಶನ ತೋರಿಸಿದೆ. ಗೆಲುವು ಸಾಧಿಸಿದ್ದ ಕ್ಷೇತ್ರದಲ್ಲಿ ಐದು ಸಾವಿರ ಮತಗಳು ಬಿದ್ದಿಲ್ಲ. ಜೆಡಿಎಸ್ ಅನ್ನು ಯಾರು ಮುಗಿಸುತ್ತಿದ್ದಾರೋ ಗೊತ್ತಿಲ್ಲ, ಆದರೆ, ಅವರ ತಪ್ಪಿನಿಂದ ಪಕ್ಷ ಅಸ್ತಿತ್ವ ಕಳೆದುಕೊಳ್ಳುವ ಸ್ಥಿತಿ ಬಂದಿದೆ ಎಂಬ ಜನಾಭಿಪ್ರಾಯವಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.</p>.<p>‘ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರು, ಸಂಸದರು ತೆರಳಿ ಪ್ರಚಾರ ನಡೆಸಿದ ಕ್ಷೇತ್ರಗಳಲ್ಲಿ ಜೆಡಿಎಸ್ ಪಡೆದಿರುವ ಮತಗಳು ಪಕ್ಷದ ಸ್ಥಿತಿಯನ್ನು ಹೇಳುತ್ತದೆ.ಜೆಡಿಎಸ್ ಪಡೆದ ಐದು ಸಾವಿರ ಮತಗಳಿಂದ ಕಾಂಗ್ರೆಸ್ಗಾಗಲಿ, ಬಿಜೆಪಿಗಾಗಲಿ ಏನುಉಪಯೋಗವಾಗುತ್ತದೆ ಎಂದು ಅರ್ಥ ಮಾಡಿಕೊಳ್ಳಬೇಕು. ಜೆಡಿಎಸ್ ಸ್ಪರ್ಧೆಯಿಂದ ಬಿಜೆಪಿಗೆಲಾಭವಾಗುತ್ತದೆ ಎಂಬ ಕಾಂಗ್ರೆಸ್ಆರೋಪದಲ್ಲಿಯಾವುದೇ ಹುರುಳಿಲ್ಲ’ ಎಂದು ಸ್ಪಷ್ಟಪಡಿಸಿದರು.</p>.<p>‘ದೇಶ ಪ್ರೇಮ ಸಂಘಟನೆಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಕಾರಣ ಜೆಡಿಎಸ್ ಪಕ್ಷವನ್ನು ಮತದಾರರು ತಿರಸ್ಕರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಕುಮಾರಣ್ಣ ಅವರ ಬಗ್ಗೆ ನನಗೆ ಅಪಾರ ಗೌರವವಿದೆ. ಆದರೆ, ಅವರು ಆರ್ಎಸ್ಎಸ್ ಸಂಘಟನೆ ಬಗ್ಗೆ ಟೀಕಿಸಿರುವುದು ಸರಿಯಲ್ಲ. ಚುನಾವಣೆ ಮುಗಿದಿರುವುದರಿಂದ ಈಗ ಆರ್ಎಸ್ಎಸ್ ಹೋರಾಟ, ಸೇವೆ, ಪರಿಶ್ರಮದ ಬಗ್ಗೆ ಚರ್ಚೆ ಮಾಡಿ ಸತ್ಯ ತಿಳಿದುಕೊಳ್ಳಲಿ’ ಎಂದು ಸಲಹೆ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>