ಕಾರ್ಯ ನಿಮಿತ್ತ ಪಟ್ಟಣಕ್ಕೆ ಬಂದಿದ್ದ ಎ.ಸಿ ಗಿರೀಶ್ ನಂದನ್ ಮಾಸ್ಕ್ ಧರಿಸದೆ ಓಡಾಡುತ್ತಿರುವುದು, ಅಂತರ ಕಾಯ್ದುಕೊಳ್ಳದೆ ವ್ಯಾಪಾರ, ವಹಿವಾಟು ನಡೆಸುತ್ತಿರುವುದನ್ನು ಕಂಡು, ಕೂಡಲೇ ಸ್ಥಳೀಯ ಅಧಿಕಾರಿಗಳನ್ನು ಕರೆಸಿ ತರಾಟೆಗೆ ತೆಗೆದುಕೊಂಡರು. ಬಳಿಕ ತಾವೇ ಕಾರ್ಯಾಚರಣೆಗೆ ಇಳಿದು ಅಂಗಡಿಗಳು, ಮೆಡಿಕಲ್ ಶಾಪ್, ಪೆಟ್ರೋಲ್ ಬಂಕ್ಗಳ ಮಾಲಿಕರಿಗೆ ಸೂಕ್ತ ಎಚ್ಚರಿಕೆ ನೀಡಿ ದಂಡ ವಿಧಿಸಿದರು. ಒಟ್ಟು ₹ 15 ಸಾವಿರ ದಂಡ ವಸೂಲಿಯಾಯಿತು.