ಸಕಲೇಶಪುರ ತಾಲ್ಲೂಕಿನ ಕೆಸಗಾನಹಳ್ಳಿ ಗ್ರಾಮದಲ್ಲಿ ಸೋಮವಾರ ಎತ್ತಿನಹೊಳೆ ಯೋಜನೆ ಕಾಮಗಾರಿ
ಪರಿಶೀಲಿಸಿದ ನಂತರ ಮಾತನಾಡಿದ ಅವರು, ಈ ಯೋಜನೆಯಲ್ಲಿ 24.01 ಟಿಎಂಸಿ ನೀರು ಲಭ್ಯವಾಗಲಿದೆ. ನಿರೀಕ್ಷಿತ ಪ್ರಮಾಣದ ಕಾಮಗಾರಿ ನಡೆಯದ ಕಾರಣ ಇಂದು ಯೋಜನಾ ವೆಚ್ಚ ₹ 23 ಸಾವಿರ ಕೋಟಿ ತಲುಪಿದೆ. 39 ಎಕರೆ ಭೂಮಿ ಸ್ವಾಧೀನ ಬಾಕಿ ಇದ್ದು, ಭೂ ಮಾಲೀಕರು ನ್ಯಾಯಾಲಯದಲ್ಲಿ ದಾವೆ ಹೂಡಿರುವುದರಿಂದ ವಿಳಂಬವಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿ ಜತೆ ಚರ್ಚಿಸಲಾಗಿದೆ. ಪರಿಹಾರ ಪಡೆಯದವರ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟು, ಭೂಮಿ ಸ್ವಾಧೀನಕ್ಕೆ ಪಡೆಯುವಂತೆ ಸೂಚನೆ ನೀಡಲಾಗಿದೆ. ಇದಕ್ಕಾಗಿ ಜಿಲ್ಲಾಡಳಿತ ಬಳಿ ₹ 200 ಕೋಟಿ ಇದೆ ಎಂದು ತಿಳಿಸಿದರು.