ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಆಹಾರ ಕಿಟ್‌ ಪಡೆಯಲು ನೂಕುನುಗ್ಗಲು

ಪ್ರತಿಭಟನೆಗೆ ಜೆಡಿಎಸ್‌, ಕಾಂಗ್ರೆಸ್‌ ಮುಖಂಡರ ಸಾಥ್‌
Last Updated 1 ಜುಲೈ 2021, 14:50 IST
ಅಕ್ಷರ ಗಾತ್ರ

ಹಾಸನ: ನಗರದ ಕಾರ್ಮಿಕ ಇಲಾಖೆ ಕಚೇರಿ ಎದುರು ಆಹಾರ ಕಿಟ್ ಪಡೆಯಲು ನೂರಾರು ಕಾರ್ಮಿಕರು ಗುರುವಾರ ಜಮಾಯಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು.

ಕಚೇರಿ ಎದುರು ಕಿಟ್‌ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಜಮಾಯಿಸಿದ ಹಿನ್ನೆಲೆಯಲ್ಲಿ ಗೊಂದಲ ಸ್ಥಿತಿ ನಿರ್ಮಾಣವಾಯಿತು. ಮಧ್ಯಾಹ್ನವಾದರೂ ಅಧಿಕಾರಿಗಳು ಕಿಟ್‌ ವಿತರಣೆಮಾಡಲಿಲ್ಲ. ಇದರಿಂದ ಆಕ್ರೋಶ ಗೊಂಡ ಕಾರ್ಮಿಕರು ಸರ್ಕಾರ ಮತ್ತು ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು.

‘ಸರ್ಕಾರ ನೀಡಿರುವ ಆಹಾರ ಕಿಟ್‌ ಸರಿಯಾಗಿ ಹಂಚಿಕೆ ಮಾಡಿಲ್ಲ. ಫುಡ್‌ ಕಿಟ್‌ನೀಡಬೇಕು’ ಎಂದು ಆಗ್ರಹಿಸಿದರು. ಸ್ಥಳಕ್ಕೆ ಬಂದ ಕಾಂಗ್ರೆಸ್ ಹಾಗೂ ಜೆಡಿಎಸ್ ಮುಖಂಡರು ಕಾರ್ಮಿಕರಿಗೆ ಬೆಂಬಲ ನೀಡಿದರು.

ಪೊಲೀಸರು ಪ್ರತಿಭಟನಕಾರರನ್ನು ನಿಯಂತ್ರಿಸಲು ಹರಸಾಹಸ ಪಟ್ಟರು. ಇಲಾಖೆ ಗೇಟ್‌ ಬಳಿ ಬಿಗಿ ಪೊಲೀಸ್‌ ಬಂದೋಬಸ್ತ್‌ ಮಾಡಿ, ಯಾರನ್ನು ಒಳಗೆ ಬಿಡಲಿಲ್ಲ.

‘ಜಿಲ್ಲೆಯಲ್ಲಿ ಅಂದಾಜು 59 ಸಾವಿರ ಜನ ನೋಂದಾಯಿತ ಕಟ್ಟಡ ಕಾರ್ಮಿಕರು ಇದ್ದು. ಹಾಸನ ತಾಲ್ಲೂಕಿನಲ್ಲಿಯೇ 23 ಸಾವಿರ ಜನ ಕಟ್ಟಡ ಕಾರ್ಮಿಕರು ನೋಂದಣಿ ಮಾಡಿಕೊಂಡಿದ್ದಾರೆ.ಹಾಸನ ತಾಲ್ಲೂಕಿಗೆ 10 ಸಾವಿರ ಆಹಾರದ ಕಿಟ್ ಬಂದಿದ್ದು, ಅದನ್ನು ಹಾಸನ ಕ್ಷೇತ್ರದಶಾಸಕರು ತಮ್ಮ ಪಕ್ಷದ ಕಾರ್ಯಕರ್ತರಿಗೆ ನೀಡಿದ್ದಾರೆ’ ಎಂದು ಕಾಂಗ್ರೆಸ್‌ ಹಾಗೂ
ಜೆಡಿಎಸ್‌ ಮುಖಂಡರು ಆರೋಪಿಸಿದರು.

ಕಾಂಗ್ರೆಸ್‌ ಮುಖಂಡರಾದ ಎಚ್‌.ಕೆ.ಮಹೇಶ್‌, ಬನವಾಸೆ ರಂಗಸ್ವಾಮಿ ಹಾಗೂ ಜೆಡಿಎಸ್ಮುಖಂಡ ಅಗಿಲೆ ಯೋಗೇಶ್‌ ಅವರು ಉಪವಿಭಾಗಾಧಿಕಾರಿ ಬಿ.ಎ.ಜಗದೀಶ್ ಮತ್ತು ಕಾರ್ಮಿಕ ಇಲಾಖೆ ಉಪ ಆಯುಕ್ತ ಸೋಮಣ್ಣ ಜತೆ ಸಮಾಲೋಚನೆ ನಡೆಸಿದರು.

‘ನೂರಾರು ಸಂಖ್ಯೆಯಲ್ಲಿ ಕಾರ್ಮಿಕರು ಬಂದಿದ್ದಾರೆ. ಕೇವಲ 500 ಕಿಟ್‌ ಮಾತ್ರ ಇದೆ.4–5 ದಿನಗಳಲ್ಲಿ ಏಳು ಸಾವಿರ ಕಿಟ್‌ ತರಿಸಿಕೊಂಡು, ನಂತರ ವಿತರಿಸಲಾಗುವುದು’ಎಂದು ಉಪ ಆಯುಕ್ತರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT