ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಹಾಯಕ ಎಂಜಿನಿಯರ್‌ ಮನೆ ಮೇಲೆ ದಾಳಿ

‌ಮನೆಗೆ ಕರೆಯಿಸಿ ದಾಖಲೆ ಪರಿಶೀಲಿಸಿದ ಎಸಿಬಿ ತಂಡ
Last Updated 21 ಜೂನ್ 2019, 14:45 IST
ಅಕ್ಷರ ಗಾತ್ರ

ಹಾಸನ: ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಲೋಕೋಪಯೋಗಿ ಇಲಾಖೆ ಉಪ ವಿಭಾಗದ ಸಹಾಯಕ ಎಂಜಿನಿಯರ್‌ ಚನ್ನೇಗೌಡರ ಮನೆ ಮೇಲೆ ಶುಕ್ರವಾರ ಬೆಳಗ್ಗೆ ದಾಳಿ ನಡೆಸಿದರು.

ಹೇಮಾವತಿ ನಗರದಲ್ಲಿರುವ ನಿವಾಸಕ್ಕೆ ಡಿಎಸ್‌ಪಿ ಪೂರ್ಣಚಂದ್ರ ತೇಜಸ್ವಿ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ, ಚನ್ನೇಗೌಡ ಹಾಗೂ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ. ಹಾಗಾಗಿ ಅಧಿಕಾರಿಗಳು ಒಂದು ಗಂಟೆಗೂ ಹೆಚ್ಚು ಸಮಯ ಕಾಯಬೇಕಾಯಿತು. ಬಳಿಕ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮನೆಗೆ ಕರೆಸಿಕೊಂಡು, ದಾಖಲೆಗಳ‌ ಪರಿಶೀಲನೆ ನಡೆಸಿದರು.

ಆದಾಯಕ್ಕಿಂತ ಅಧಿಕ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂಬ ದೂರಿನ ಮೇರೆಗೆ ಚನ್ನೇಗೌಡರ ಶಾಂತಿಗ್ರಾಮದ ನಿವಾಸದ ಮೇಲೂ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT