ಹೇಮಾವತಿ ನಗರದಲ್ಲಿರುವ ನಿವಾಸಕ್ಕೆ ಡಿಎಸ್ಪಿ ಪೂರ್ಣಚಂದ್ರ ತೇಜಸ್ವಿ ನೇತೃತ್ವದ ತಂಡ ದಾಳಿ ನಡೆಸಿದ ವೇಳೆ, ಚನ್ನೇಗೌಡ ಹಾಗೂ ಕುಟುಂಬ ಸದಸ್ಯರು ಮನೆಯಲ್ಲಿ ಇರಲಿಲ್ಲ. ಹಾಗಾಗಿ ಅಧಿಕಾರಿಗಳು ಒಂದು ಗಂಟೆಗೂ ಹೆಚ್ಚು ಸಮಯ ಕಾಯಬೇಕಾಯಿತು. ಬಳಿಕ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಮನೆಗೆ ಕರೆಸಿಕೊಂಡು, ದಾಖಲೆಗಳ ಪರಿಶೀಲನೆ ನಡೆಸಿದರು.