<p><strong>ಬೇಲೂರು:</strong> ಇಲ್ಲಿನ ಬಸ್ ನಿಲ್ದಾಣದ ಮುಂಭಾಗ ಕಟ್ಟಡದ ಸಜ್ಜಾ ಕುಸಿತದಿಂದ ಇಬ್ಬರು ಭಾನುವಾರ ಮೃತಪಟ್ಟ ಪ್ರಕರಣ ಸಂಬಂಧ ಕಟ್ಟಡದ ಮಾಲಿಕ ದಿ.ಸತ್ಯನಾರಾಯಣಗೌಡರ ಪುತ್ರ ಅವಿನಾಶ್ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಇಬ್ಬರಿಗೆ ಕಾಲಿನ ಮೂಳೆ ಮುರಿದಿದ್ದು, ಚಿಕಿತ್ಸೆ ಪಡೆಯುತ್ತಿರುವ ಶಿಲ್ಪಾ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಅವಿನಾಶ್ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ವ್ಯಾಪಾರ ನಡೆಸುತ್ತಿದ್ದ ಕಟ್ಟಡದ ಉಳಿದ ಮಳಿಗೆಗಳನ್ನು ಬಂದ್ ಮಾಡಿ ವ್ಯಾಪಾರ ನಡೆಸದಂತೆ ನಿರ್ಬಂಧ ಹೇರಲಾಗಿದೆ. ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದುಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಎರಡು ಡಿ.ಆರ್.ತುಕ್ಕಡಿ ನಿಯೋಜಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ರೇವಣ್ಣ ತಿಳಿಸಿದರು.</p>.<p>ಶಾಸಕ ಎಚ್.ಕೆ.ಸುರೇಶ್ ಈ ಬಗ್ಗೆ ಸದನದಲ್ಲಿ ಮಾತನಾಡಿ, ‘ಮೃತಪಟ್ಟವರಿಗೆ ತಲಾ ₹50 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹25 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ಬಂದು ಗಮನ ನೀಡಿಲ್ಲ, ಹಾಸನ ಜಿಲ್ಲೆ ಕರ್ನಾಟಕದಲ್ಲಿ ಇದೆಯೋ, ಕರ್ನಾಟಕ ಹೊರತು ಪಡಿಸಿ ಇದೆಯೋ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಬೇಲೂರು | ಕಾಂಕ್ರೀಟ್ ಸಜ್ಜಾ ಕುಸಿದು ಇಬ್ಬರು ಸಾವು: ಇನ್ನಿಬ್ಬರ ಸ್ಥಿತಿ ಗಂಭೀರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು:</strong> ಇಲ್ಲಿನ ಬಸ್ ನಿಲ್ದಾಣದ ಮುಂಭಾಗ ಕಟ್ಟಡದ ಸಜ್ಜಾ ಕುಸಿತದಿಂದ ಇಬ್ಬರು ಭಾನುವಾರ ಮೃತಪಟ್ಟ ಪ್ರಕರಣ ಸಂಬಂಧ ಕಟ್ಟಡದ ಮಾಲಿಕ ದಿ.ಸತ್ಯನಾರಾಯಣಗೌಡರ ಪುತ್ರ ಅವಿನಾಶ್ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ಇಬ್ಬರಿಗೆ ಕಾಲಿನ ಮೂಳೆ ಮುರಿದಿದ್ದು, ಚಿಕಿತ್ಸೆ ಪಡೆಯುತ್ತಿರುವ ಶಿಲ್ಪಾ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಅವಿನಾಶ್ ವಿರುದ್ಧ ಪ್ರಕರಣ ದಾಖಲಾಗಿದೆ.</p>.<p>ವ್ಯಾಪಾರ ನಡೆಸುತ್ತಿದ್ದ ಕಟ್ಟಡದ ಉಳಿದ ಮಳಿಗೆಗಳನ್ನು ಬಂದ್ ಮಾಡಿ ವ್ಯಾಪಾರ ನಡೆಸದಂತೆ ನಿರ್ಬಂಧ ಹೇರಲಾಗಿದೆ. ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸೂಕ್ತ ಬಂದುಬಸ್ತ್ ವ್ಯವಸ್ಥೆ ಮಾಡಲಾಗಿದ್ದು ಎರಡು ಡಿ.ಆರ್.ತುಕ್ಕಡಿ ನಿಯೋಜಿಸಲಾಗಿದೆ ಎಂದು ಪೊಲೀಸ್ ಇನ್ಸ್ಪೆಕ್ಟರ್ ರೇವಣ್ಣ ತಿಳಿಸಿದರು.</p>.<p>ಶಾಸಕ ಎಚ್.ಕೆ.ಸುರೇಶ್ ಈ ಬಗ್ಗೆ ಸದನದಲ್ಲಿ ಮಾತನಾಡಿ, ‘ಮೃತಪಟ್ಟವರಿಗೆ ತಲಾ ₹50 ಲಕ್ಷ ಹಾಗೂ ಗಾಯಗೊಂಡವರಿಗೆ ತಲಾ ₹25 ಲಕ್ಷ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾಮಟ್ಟದ ಅಧಿಕಾರಿಗಳು ಬಂದು ಗಮನ ನೀಡಿಲ್ಲ, ಹಾಸನ ಜಿಲ್ಲೆ ಕರ್ನಾಟಕದಲ್ಲಿ ಇದೆಯೋ, ಕರ್ನಾಟಕ ಹೊರತು ಪಡಿಸಿ ಇದೆಯೋ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.</p>.ಬೇಲೂರು | ಕಾಂಕ್ರೀಟ್ ಸಜ್ಜಾ ಕುಸಿದು ಇಬ್ಬರು ಸಾವು: ಇನ್ನಿಬ್ಬರ ಸ್ಥಿತಿ ಗಂಭೀರ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>