ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಲೇಶಪುರದಲ್ಲಿ ಶಿವರಾತ್ರಿ ರಾಜೇಂದ್ರ ಶ್ರೀಗಳ ಜಯಂತಿ ಮಹೋತ್ಸವ ನಾಳೆ

Published 21 ಸೆಪ್ಟೆಂಬರ್ 2023, 13:16 IST
Last Updated 21 ಸೆಪ್ಟೆಂಬರ್ 2023, 13:16 IST
ಅಕ್ಷರ ಗಾತ್ರ

‌ಸಕಲೇಶಪುರ: ಜೆಎಸ್‌ಎಸ್‌ ಶಿಕ್ಷಣ ಸಂಸ್ಥೆಗಳು, ಮಲೆನಾಡು ವೀರಶೈವ ಸಮಾಜ ಹಾಗೂ ಅಂಗಸಂಸ್ಥೆಗಳ, ಆಶ್ರಯದಲ್ಲಿ ಸುತ್ತೂರು ಜಗದ್ಗುರು  ಶಿವರಾತ್ರಿ ರಾಜೇಂದ್ರ ಸ್ವಾಮೀಜಿ ಅವರ 108ನೇ ಜಯಂತಿ ಮಹೋತ್ಸವವನ್ನು ಸೆ. 23 ರಂದು ಪಟ್ಟಣದ ಗುರುವೇಗೌಡ ಕಲ್ಯಾಣ ಮಂಟಪದಲ್ಲಿ ಆಚರಿಸಲಾಗುತ್ತದೆ ಎಂದು ಮಲೆನಾಡು ವೀರಶೈವ ಸಮಾಜದ ಅದ್ಯಕ್ಷ ಎಚ್‌.ಎನ್‌.ದೇವರಾಜ್ ಹೇಳಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅರಕಲಗೂಡು ದೊಡ್ಡಮಠದ ಮಲ್ಲಿಕಾರ್ಜುನ ಸ್ವಾಮಿ, ಶಾಸಕ ಸಿಮೆಂಟ್ ಮಂಜು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಪ್ರಮುಖರಾದ ಬಿ.ಆರ್. ಗುರುದೇವ್, ೆಚ್.ಕೆ. ಕುಮಾರಸ್ವಾಮಿ ಮತ್ತು ಎಚ್.ಎಂ. ವಿಶ್ವನಾಥ್, ಕಾಂಗ್ರೆಸ್ ಮುಖಂಡರಾದ ಮುರಳಿ ಮೋಹನ್,ಗುರುವೇಗೌಡ ಕಲ್ಯಾಣಮಂಟಪ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಬಿ.ಡಿ.ಬಸವಣ್ಣ ಭಾಗವಹಿಸುವರು ಎಂದರು.

ಜೆಎಸ್ಎಸ್ ವಿದ್ಯಾಸಂಸ್ಥೆಯ ಅಧೀಕ್ಷಕ ಮಂಜುನಾಥ್ ಮಾತನಾಡಿ,  ಅಂದು ಬೆಳಿಗ್ಗೆ 8ಕ್ಕೆ ರೋಟರಿ ಎನ್.ಕೆ. ಗಣಪಯ್ಯ ಶ್ರವಣದೋಷವುಳ್ಳ ಶಾಲೆಯ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ, 8.30 ಕ್ಕೆ ಕ್ರಾಫರ್ಡ್ ಆಸ್ಪತ್ರೆಯ ರೋಗಿಗಳಿಗೆ ಹಣ್ಣು ಹಂಪಲು ವಿತರಣೆ,  ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ. ಗೆ 9ಕ್ಕೆ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಶ್ರೀಗಳವರ ಭಾವಚಿತ್ರ ಮೆರವಣಿಗೆಗೆ ಉಪ ವಿಭಾಗಾಧಿಕಾರಿ  ಕೆ.ಎಂ. ಶ್ರುತಿ ಚಾಲನೆ ನೀಡಲಿದ್ದಾರೆ ಎಂದರು. ವೀರಶೈವ ಸಮಾಜ ಮುಖಂಡರಾದ ಅರೆಕೆರೆ ನರೇಶ್, ಗಗನ್, ಜೆಎಸ್‌ಎಸ್‌ ಬಿಇಡಿ ಕಾಲೇಜಿನ ಪ್ರಾಂಶುಪಾಲ ಡಾ.ನಂಜುಡಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT