<p><strong>ಸಕಲೇಶಪುರ</strong>: ಶಿವರಾತ್ರಿ ಅಂಗವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿರುವ ಭಕ್ತರಿಗೆ ಪಟ್ಟಣದ ರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಕಾಫಿ, ಬ್ರೆಡ್, ಹಣ್ಣು, ಬಿಸ್ಕತ್, ತಂಪು ಪಾನೀಯ ಹಾಗೂ ಕುಡಿಯುವ ನೀರನ್ನು ಗುರುವಾರ ವಿತರಣೆ ಮಾಡಿದರು.</p>.<p>ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ತಾರಾ ರೇಡಿಯೋ ರಾಘು, ಟ್ರಸ್ಟಿ ಬಾಲರಾಜ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಶಿವರಾತ್ರಿ ಸಂದರ್ಭ ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ ಭಕ್ತರಿಗೆ ಸೇವೆ ಸಲ್ಲಿಸಲಾಗುತ್ತಿದ್ದು, ಈ ವರ್ಷವೂ ಎರಡು ದಿನಗಳ ಕಾಲ ಬೆಳಿಗ್ಗೆ 4 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಾದಯಾತ್ರಿಗಳಿಗೆ ಅಗತ್ಯವಾದ ಆಹಾರ ಪದಾರ್ಥಗಳು ಹಾಗೂ ಪಾನೀಯಗಳನ್ನು ವಿತರಿಸಲಾಗುತ್ತಿದೆ ಎಂದರು.</p>.<p>ಇದೇ ರೀತಿ ಪಟ್ಟಣದಲ್ಲಿ ರಾಘವೇಂದ್ರ ಸ್ವಾಮಿಯವರ ಆರಾಧನೋತ್ಸವ ಹಾಗೂ ಜಯಂತ್ಯುತ್ಸವವನ್ನು ಕೂಡ ಟ್ರಸ್ಟ್ ವತಿಯಿಂದ ನಿಯಮಿತವಾಗಿ ಆಚರಿಸಲಾಗುತ್ತಿದೆ. ಸಕಲೇಶಪುರದಲ್ಲಿ ಸಾವಿರಾರು ರಾಘವೇಂದ್ರ ಸ್ವಾಮಿ ಭಕ್ತರು ಇರುವುದರಿಂದ, ಇಲ್ಲಿಯೇ ರಾಘವೇಂದ್ರ ಸ್ವಾಮಿಯ ಮಠವನ್ನು ಸ್ಥಾಪಿಸುವುದು ಭಕ್ತಾದಿಗಳ ಬಹುಕಾಲದ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಟ್ರಸ್ಟ್ ಅಧ್ಯಕ್ಷರಾದ ತಾರಾ ರಾಘವೇಂದ್ರ ಅವರ ನೇತೃತ್ವದಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದರು.</p>.<p>ಟ್ರಸ್ಟ್ ಸದಸ್ಯರಾದ ಜಗದೀಶ್, ಸೋಮಶೇಖರ್, ವಿಜೀತ್, ಅಪ್ಪಣ್ಣಿ, ಅಕ್ಷತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ</strong>: ಶಿವರಾತ್ರಿ ಅಂಗವಾಗಿ ಧರ್ಮಸ್ಥಳಕ್ಕೆ ಪಾದಯಾತ್ರೆ ಹೊರಟಿರುವ ಭಕ್ತರಿಗೆ ಪಟ್ಟಣದ ರಾಘವೇಂದ್ರ ಸ್ವಾಮಿ ಸೇವಾ ಟ್ರಸ್ಟ್ ವತಿಯಿಂದ ಕಾಫಿ, ಬ್ರೆಡ್, ಹಣ್ಣು, ಬಿಸ್ಕತ್, ತಂಪು ಪಾನೀಯ ಹಾಗೂ ಕುಡಿಯುವ ನೀರನ್ನು ಗುರುವಾರ ವಿತರಣೆ ಮಾಡಿದರು.</p>.<p>ಈ ಸಂದರ್ಭದಲ್ಲಿ ಟ್ರಸ್ಟ್ ಅಧ್ಯಕ್ಷ ತಾರಾ ರೇಡಿಯೋ ರಾಘು, ಟ್ರಸ್ಟಿ ಬಾಲರಾಜ್ ಮಾತನಾಡಿ, ಕಳೆದ ನಾಲ್ಕು ವರ್ಷಗಳಿಂದ ಶಿವರಾತ್ರಿ ಸಂದರ್ಭ ಧರ್ಮಸ್ಥಳಕ್ಕೆ ಪಾದಯಾತ್ರೆ ಹೋಗುವ ಭಕ್ತರಿಗೆ ಸೇವೆ ಸಲ್ಲಿಸಲಾಗುತ್ತಿದ್ದು, ಈ ವರ್ಷವೂ ಎರಡು ದಿನಗಳ ಕಾಲ ಬೆಳಿಗ್ಗೆ 4 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಾದಯಾತ್ರಿಗಳಿಗೆ ಅಗತ್ಯವಾದ ಆಹಾರ ಪದಾರ್ಥಗಳು ಹಾಗೂ ಪಾನೀಯಗಳನ್ನು ವಿತರಿಸಲಾಗುತ್ತಿದೆ ಎಂದರು.</p>.<p>ಇದೇ ರೀತಿ ಪಟ್ಟಣದಲ್ಲಿ ರಾಘವೇಂದ್ರ ಸ್ವಾಮಿಯವರ ಆರಾಧನೋತ್ಸವ ಹಾಗೂ ಜಯಂತ್ಯುತ್ಸವವನ್ನು ಕೂಡ ಟ್ರಸ್ಟ್ ವತಿಯಿಂದ ನಿಯಮಿತವಾಗಿ ಆಚರಿಸಲಾಗುತ್ತಿದೆ. ಸಕಲೇಶಪುರದಲ್ಲಿ ಸಾವಿರಾರು ರಾಘವೇಂದ್ರ ಸ್ವಾಮಿ ಭಕ್ತರು ಇರುವುದರಿಂದ, ಇಲ್ಲಿಯೇ ರಾಘವೇಂದ್ರ ಸ್ವಾಮಿಯ ಮಠವನ್ನು ಸ್ಥಾಪಿಸುವುದು ಭಕ್ತಾದಿಗಳ ಬಹುಕಾಲದ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಟ್ರಸ್ಟ್ ಅಧ್ಯಕ್ಷರಾದ ತಾರಾ ರಾಘವೇಂದ್ರ ಅವರ ನೇತೃತ್ವದಲ್ಲಿ ಪ್ರಯತ್ನಗಳು ನಡೆಯುತ್ತಿವೆ ಎಂದರು.</p>.<p>ಟ್ರಸ್ಟ್ ಸದಸ್ಯರಾದ ಜಗದೀಶ್, ಸೋಮಶೇಖರ್, ವಿಜೀತ್, ಅಪ್ಪಣ್ಣಿ, ಅಕ್ಷತ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>