<p><strong>ಸಕಲೇಶಪುರ</strong>: ಪಟ್ಟಣದಲ್ಲಿರುವ ಪುರಸಭೆ ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದು 12 ವರ್ಷಗಳು ಕಳೆದಿದದು ಎಲ್ಲಾ ಮಳಿಗೆಗಳನ್ನು ಮರು ಹರಾಜು ಮಾಡಲು ಸೋಮವಾರ ಪುರಸಭಾ ಅಧ್ಯಕ್ಷೆ ಆರ್.ಬಿ. ಜ್ಯೋತಿ ರಾಜ್ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.</p>.<p>ಪಟ್ಟಣದ ಬಿ.ಎಂ. ರಸ್ತೆಯಲ್ಲಿರುವ ಹೇಮಾವತಿ ಕಾಂಪ್ಲೆಕ್ಸ್, ಪುರಸಭಾ ಮುಂಭಾಗದ ವಾಣಿಜ್ಯ ಮಳಿಗೆ, ಕ್ರಾಫರ್ಡ್ ಆಸ್ಪತ್ರೆಯ ರಸ್ತೆಯಲ್ಲಿರುವ ಮಳಿಗೆಗಳು ಸೇರಿದಂತೆ ಒಟ್ಟು 128 ಮಳಿಗೆಗಳನ್ನು ಮರು ಹರಾಜು ಮಾಡಲು ಎಲ್ಲಾ ಸದಸ್ಯರು ಒಪ್ಪಿಗೆ ಸೂಚಿಸಿದರು.</p>.<p>15ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳ ಮರು ಹರಾಜಿಗೆ ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ದೊರೆಯಿತು.</p>.<p>ಕುಡಿಯುವ ನೀರು ಯೋಜನೆಯ ಅನೇಕ ಟೆಂಡರ್ಗಳನ್ನು ಅನುಮೋದಿಸುವ, ಸಕಲೇಶ್ವರಸ್ವಾಮಿ ರಥೋತ್ಸವ ಅಂಗವಾಗಿ ನಡೆಯುವ ವಸ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಉಪಾಧ್ಯಕ್ಷೆ ಝರೀನಾ ಹಾಗೂ ಸದಸ್ಯರು, ಮುಖ್ಯಾಧಿಕಾರಿ ಮಹೇಶ್ವರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ</strong>: ಪಟ್ಟಣದಲ್ಲಿರುವ ಪುರಸಭೆ ವಾಣಿಜ್ಯ ಮಳಿಗೆಗಳ ಕರಾರು ಅವಧಿ ಮುಗಿದು 12 ವರ್ಷಗಳು ಕಳೆದಿದದು ಎಲ್ಲಾ ಮಳಿಗೆಗಳನ್ನು ಮರು ಹರಾಜು ಮಾಡಲು ಸೋಮವಾರ ಪುರಸಭಾ ಅಧ್ಯಕ್ಷೆ ಆರ್.ಬಿ. ಜ್ಯೋತಿ ರಾಜ್ಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.</p>.<p>ಪಟ್ಟಣದ ಬಿ.ಎಂ. ರಸ್ತೆಯಲ್ಲಿರುವ ಹೇಮಾವತಿ ಕಾಂಪ್ಲೆಕ್ಸ್, ಪುರಸಭಾ ಮುಂಭಾಗದ ವಾಣಿಜ್ಯ ಮಳಿಗೆ, ಕ್ರಾಫರ್ಡ್ ಆಸ್ಪತ್ರೆಯ ರಸ್ತೆಯಲ್ಲಿರುವ ಮಳಿಗೆಗಳು ಸೇರಿದಂತೆ ಒಟ್ಟು 128 ಮಳಿಗೆಗಳನ್ನು ಮರು ಹರಾಜು ಮಾಡಲು ಎಲ್ಲಾ ಸದಸ್ಯರು ಒಪ್ಪಿಗೆ ಸೂಚಿಸಿದರು.</p>.<p>15ನೇ ಹಣಕಾಸು ಯೋಜನೆಯ ವಿವಿಧ ಕಾಮಗಾರಿಗಳ ಮರು ಹರಾಜಿಗೆ ಸಭೆಯಲ್ಲಿ ಸರ್ವಾನುಮತದ ಒಪ್ಪಿಗೆ ದೊರೆಯಿತು.</p>.<p>ಕುಡಿಯುವ ನೀರು ಯೋಜನೆಯ ಅನೇಕ ಟೆಂಡರ್ಗಳನ್ನು ಅನುಮೋದಿಸುವ, ಸಕಲೇಶ್ವರಸ್ವಾಮಿ ರಥೋತ್ಸವ ಅಂಗವಾಗಿ ನಡೆಯುವ ವಸ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಚರ್ಚೆ ನಡೆಯಿತು.</p>.<p>ಉಪಾಧ್ಯಕ್ಷೆ ಝರೀನಾ ಹಾಗೂ ಸದಸ್ಯರು, ಮುಖ್ಯಾಧಿಕಾರಿ ಮಹೇಶ್ವರಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>