ರಸ್ತೆಯಲ್ಲಿಯೇ ನಿಲ್ಲಿಸಿ ವಾಹನದಲ್ಲಿದ್ದವರ ವಿಚಾರಣೆ ನಡೆಸಿದ ಪೊಲೀಸರು, ಅವರ ವಿವರಣೆಯಿಂದ ತೃಪ್ತರಾಗದೇ ಸಕಲೇಶಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದರು. ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಿದ ವೇಳೆ, ಎಫ್ಐಆರ್ ಪ್ರತಿ, ಇತರೆ ದಾಖಲೆಗಳನ್ನು ತೋರಿಸಿದ ಆಂಧ್ರಪ್ರದೇಶದ ಪೊಲೀಸರು ತಾವು ಆರೋಪಿಯನ್ನು ವಶಕ್ಕೆ ಪಡೆದು ಕರೆದೊಯ್ಯುತ್ತಿರುವುದಾಗಿ ಸ್ಪಷ್ಟಪಡಿಸಿದರು. ನಿಜ ಸಂಗತಿ ಅರ್ಥ ಮಾಡಿಕೊಂಡ ಸಕಲೇಶಪುರ ಗ್ರಾಮಾಂತರ ಠಾಣೆ ಪೊಲೀಸರು, ಆರೋಪಿಯನ್ನು ಆಂಧ್ರಪ್ರದೇಶ ಪೊಲೀಸರ ಜೊತೆಗೆ ಕಳುಹಿಸಿಕೊಟ್ಟರು.