ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ‘ಸಕಲೇಶಪುರ ತಾಲ್ಲೂಕು ಕೇಂದ್ರ ಸಂಪರ್ಕಿಸಲು ಹಾನಬಾಳು, ಅವರೇಕಾಡು ಮತ್ತು ಡೋನಹಳ್ಳಿ ಗ್ರಾಮಗಳಿಗೆ ರಸ್ತೆ ಇಲ್ಲವಾಗಿದೆ. ಸ್ವಾತಂತ್ರ್ಯ ದೊರೆತ ಕಾಲದಿಂದಲೂ ಈ ಮೂರು ಗ್ರಾಮಗಳಿಗೆ ರಸ್ತೆ ಸಂಪರ್ಕ ಇಲ್ಲ. ಇದರಿಂದ ವಿದ್ಯಾರ್ಥಿಗಳು, ಗರ್ಭಿಣಿಯರು, ಮಹಿಳೆಯರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. ರೈತರು ತಮ್ಮ ಉತ್ಪನ್ನಗಳನ್ನು ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಕೇಂದ್ರಕ್ಕೆ ಕೊಂಡೊಯ್ಯಲು ಕಷ್ಟವಾಗುತ್ತಿದೆ’ ಎಂದು ವಿವರಿಸಿದರು.