ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ಸಕಲೇಶಪುರ: 15 ವರ್ಷಗಳಿಂದ ನಿರ್ಮಾಣ ಹಂತದಲ್ಲೇ ಉಳಿದ ಪುರಸಭೆ ವಾಣಿಜ್ಯ ಸಂಕೀರ್ಣ

Published : 9 ಜನವರಿ 2026, 7:29 IST
Last Updated : 9 ಜನವರಿ 2026, 7:29 IST
ಫಾಲೋ ಮಾಡಿ
Comments
ಗುತ್ತಿಗೆದಾರರ ಸಮಸ್ಯೆಯಿಂದ ಕಾಮಗಾರಿ ಪೂರ್ಣಗೊಂಡಿಲ್ಲ. ಮೊದಲ ಹಂತದ ಮಳಿಗೆಗಳಿಗೆ ಗೋಡೆ, ರೋಲಿಂಗ್ ಶೆಟ್ಟರ್, ವಿದ್ಯುತ್ ಸಂಪರ್ಕ ಕಲ್ಪಿಸಿ ಶೀಘ್ರ ಕಾಮಗಾರಿ ಪೂರ್ಣಗೊಳಿಸಲಾಗುವುದು.
ಟಿ.ಸಿ. ಮಹೇಶ್ವರಪ್ಪ, ಪುರಸಭೆ ಮುಖ್ಯಾಧಿಕಾರಿ
ಈ ಜಾಗವನ್ನು ಸಿಟಿ ಬಸ್‌ನಿಲ್ದಾಣಕ್ಕೆ ಬಳಕೆ ಮಾಡಬೇಕಾಗಿತ್ತು. ಸಾರ್ವಜನಿಕರ ಅನುಕೂಲ ಯೋಚನೆ ಮಾಡದೇ, ಮನಸ್ಸಿಗೆ ಬಂದಂತೆ ಕಟ್ಟಡ ಕಟ್ಟಿದ್ದಾರೆ. ಈ ಬಗ್ಗೆ ಕೂಡಲೇ ನಿರ್ಧಾರ ತೆಗೆದುಕೊಳ್ಳಲಾಗುವುದು
ಸಿಮೆಂಟ್ ಮಂಜು, ಶಾಸಕ
ಬೀದಿ ಬದಿ ವ್ಯಾಪಾರಿಗಳಿಗೆ ನೀಡಿ
‘ಹಳೆ ಬಸ್‌ ನಿಲ್ದಾಣ ಆವರಣದಲ್ಲಿ ತೆರವುಗೊಳಿಸಲಾಗಿರುವ ಬೀದಿ ಬದಿ ವ್ಯಾಪಾರಿಗಳಿಗೆ ಬದಲಿ ವ್ಯವಸ್ಥೆ ಮಾಡುವವರೆಗೂ ಅಪೂರ್ಣ ಕಟ್ಟಡದ ನೆಲ ಮಳಿಗೆಯಲ್ಲಿ ತಾತ್ಕಾಲಿಕವಾಗಿ ವ್ಯವಸ್ಥೆ ಕಲ್ಪಿಸುವುದು ಸೂಕ್ತ’ ಎಂದು ವರ್ತಕರು ಹೇಳುತ್ತಿದ್ದಾರೆ. ಇತ್ತೀಚೆಗೆ ಸ್ಥಳ ಪರಿಶೀಲಿಸಿದ ಶಾಸಕ ಸಿಮೆಂಟ್‌ ಮಂಜು ಅವರ ಗಮನವನ್ನೂ ಸೆಳೆದಿದ್ದಾರೆ. ‌ ‘ವ್ಯಾಪಾರ ಶುರು ಮಾಡಿದರೆ, ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಬೀಳುತ್ತದೆ. ಬೀದಿ ಬದಿಯ ವ್ಯಾಪಾರಿಗಳಿಗೆ ಅನುಕೂಲವೂ ಆಗುತ್ತದೆ’ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT