<p>ಹಾಸನ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದರು.</p><p>ದೋಣಿಗಾಲ್ ಬಳಿ ಕಳೆದ ಹಲವು ವರ್ಷಗಳಿಂದಲೂ ಭೂಕುಸಿತದ ಸಮಸ್ಯೆ ಎದುರಿತ್ತಿರುವ ಸ್ಥಳವನ್ನು ಪರಿಶೀಲಿಸಿದ ಅವರು, ಆದಷ್ಟು ಶೀಘ್ರವಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ಇದೇ ವೇಳೆ ರಸ್ತೆ ಕಾಮಗಾರಿಯಿಂದ ಭೂ ಕುಸಿತ ಉಂಟಾಗಿ, ಜಮೀನು ಕಳೆದುಕೊಂಡ ಭೂ ಮಾಲೀಕರ ಅಹವಾಲು ಆಲಿಸಿದ ಅವರು, ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.</p><p>ಸಕಲೇಶಪುರದಿಂದ ಗುಂಡ್ಯವರಗೆ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಜಾರಕಿಹೊಳಿ, ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ನಿರ್ವಹಣೆ ಮಾಡುವಂತೆ ಸಚಿವರು ಸೂಚನೆ ನೀಡಿದರು.</p><p>ಶಾಸಕ ಸಿಮೆಂಟ್ ಮಂಜು, ಲೋಕೊಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಧರ್ಮೇಂದ್ರ, ಎಸ್ಎಚ್ಡಿಪಿ ಮುಖ್ಯ ಯೋಜನಾಧಿಕಾರಿ ಶಿವಯೋಗಿ ಹಿರೇಮಠ, ಉಪ ವಿಭಾಗಾಧಿಕಾರಿ ಅನಮೋಲ್ ಜೈನ್, ಕಾಂಗ್ರೆಸ್ ಮುಖಂಡ ಮುರಳಿಮೋಹನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾಸನ: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಶನಿವಾರ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪರಿಶೀಲಿಸಿದರು.</p><p>ದೋಣಿಗಾಲ್ ಬಳಿ ಕಳೆದ ಹಲವು ವರ್ಷಗಳಿಂದಲೂ ಭೂಕುಸಿತದ ಸಮಸ್ಯೆ ಎದುರಿತ್ತಿರುವ ಸ್ಥಳವನ್ನು ಪರಿಶೀಲಿಸಿದ ಅವರು, ಆದಷ್ಟು ಶೀಘ್ರವಾಗಿ ಸಮಸ್ಯೆಗೆ ಶಾಶ್ವತ ಪರಿಹಾರ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.</p><p>ಇದೇ ವೇಳೆ ರಸ್ತೆ ಕಾಮಗಾರಿಯಿಂದ ಭೂ ಕುಸಿತ ಉಂಟಾಗಿ, ಜಮೀನು ಕಳೆದುಕೊಂಡ ಭೂ ಮಾಲೀಕರ ಅಹವಾಲು ಆಲಿಸಿದ ಅವರು, ಪರಿಹಾರ ದೊರಕಿಸಿಕೊಡುವ ಭರವಸೆ ನೀಡಿದರು.</p><p>ಸಕಲೇಶಪುರದಿಂದ ಗುಂಡ್ಯವರಗೆ ರಸ್ತೆ ಕಾಮಗಾರಿ ಪರಿಶೀಲಿಸಿದ ಸಚಿವ ಜಾರಕಿಹೊಳಿ, ಕಾಲಮಿತಿಯೊಳಗೆ ಗುಣಮಟ್ಟದೊಂದಿಗೆ ಕಾಮಗಾರಿ ನಿರ್ವಹಣೆ ಮಾಡುವಂತೆ ಸಚಿವರು ಸೂಚನೆ ನೀಡಿದರು.</p><p>ಶಾಸಕ ಸಿಮೆಂಟ್ ಮಂಜು, ಲೋಕೊಪಯೋಗಿ ಇಲಾಖೆ ಕಾರ್ಯದರ್ಶಿ ಸತ್ಯನಾರಾಯಣ, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯ ಎಂಜಿನಿಯರ್ ಧರ್ಮೇಂದ್ರ, ಎಸ್ಎಚ್ಡಿಪಿ ಮುಖ್ಯ ಯೋಜನಾಧಿಕಾರಿ ಶಿವಯೋಗಿ ಹಿರೇಮಠ, ಉಪ ವಿಭಾಗಾಧಿಕಾರಿ ಅನಮೋಲ್ ಜೈನ್, ಕಾಂಗ್ರೆಸ್ ಮುಖಂಡ ಮುರಳಿಮೋಹನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>