‘ಹೇಮಾವತಿ ಹೊಳೆ, ಐಗೂರು, ಚಿಕ್ಕಲ್ಲೂರು ಹಳ್ಳದಿಂದ ರಾತ್ರಿ ವೇಳೆ ಭಾರಿ ಪ್ರಮಾಣದಲ್ಲಿ ಮರಳು ಸಾಗಿಸಲಾಗುತ್ತಿದೆ. ಟಿಪ್ಪರ್ಗಳ ಓಡಾಟ ಹಾಗೂ ದೂಳಿನಿಂದ ಉಂಟಾಗುತ್ತಿರುವ ಸಮಸ್ಯೆ ಕುರಿತು ಸ್ಥಳೀಯರು ದೂರು ನೀಡಿದ್ದರು. ಹೀಗಾಗಿ, ಖಾಸಗಿ ವಾಹನಗಳಲ್ಲಿ ತೆರಳಿ ದಾಳಿ ನಡೆಸಿದೆವು’ ಎಂದು ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್ ‘ಪ್ರಜಾವಾಣಿ’ಗೆ ತಿಳಿಸಿದರು.