ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕಲೇಶಪುರ: ತೋಟದಲ್ಲಿ ಶ್ರೀಗಂಧದ ಮರ ಕಳವು

Last Updated 24 ಡಿಸೆಂಬರ್ 2020, 2:34 IST
ಅಕ್ಷರ ಗಾತ್ರ

ಸಕಲೇಶಪುರ: ಮಾಜಿ ಶಾಸಕ ಎಚ್‌.ಎಂ. ವಿಶ್ವನಾಥ್ ಅವರ ಕಾಫಿ ತೋಟದಲ್ಲಿ ಮಂಗಳವಾರ ತಡರಾತ್ರಿ ಮೂರು ಶ್ರೀಗಂಧದ ಮರಗಳನ್ನು ಕಡಿದು ಕಳ್ಳತನ ಮಾಡಲಾಗಿದೆ.

ತೋಟ ಹಾಗೂ ಬೇಲಿಯಲ್ಲಿ ಇದ್ದ ಶ್ರೀಗಂಧದ ಮರಗಳನ್ನು ಕಡಿದುಕೊಂಡು ಹೋಗಿದ್ದಾರೆ ಎಂದು ವಿಶ್ವನಾಥ್ ಅವರು ಅರಣ್ಯ ಇಲಾಖೆಗೆ ಲಿಖಿತ ದೂರು ಸಹ ನೀಡಿದ್ದಾರೆ.

ಎರಡು ವರ್ಷಗಳ ಹಿಂದೆ ಇದೇ ತೋಟದಲ್ಲಿ ಕೆಲ ಶ್ರೀಗಂಧದ ಮರಗಳು ಕಳ್ಳತನ ಆಗಿರುವ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ ಸಹ ಈವರೆಗೂ ಆ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT