<p><strong>ಅರಸೀಕೆರೆ (ಹಾಸನ):</strong> ಕ್ಷೇತ್ರದಲ್ಲಿ ಎನ್.ಆರ್. ಸಂತೋಷ್ ಅವರಿಗೆ ಟಿಕೆಟ್ ತಪ್ಪಿದ್ದರಿಂದ ಆಕ್ರೋಶಗೊಂಡ ಬೆಂಬಲಿಗರು, ಬಿಜೆಪಿ ಬಾವುಟ ಸುಟ್ಟು ಹಾಕಿದರು. </p>.<p>ಬಿಜೆಪಿ ಫ್ಲೆಕ್ಸ್ಗಳನ್ನು ಹರಿದು ಹಾಕಿದ ಬೆಂಬಲಿಗರು, ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದರು. ‘ಬಿಜೆಪಿ ಟಿಕೆಟ್ ನೀಡಿರುವ ಜಿ.ವಿ. ಬಸವರಾಜು 5 ಸಾವಿರ ಮತ ಪಡೆಯಲ್ಲ. ಇಡೀ ಅರಸೀಕೆರೆ ಕ್ಷೇತ್ರದಲ್ಲಿ ಬಿಜೆಪಿ ಹಾಳು ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ನಾನು ಎನ್.ಆರ್.ಸಂತೋಷ್ ಗೆಲ್ಲಲಿ ಎಂದು ಗಡ್ಡ ಬಿಟ್ಟಿದ್ದೆ. ಈಗ ಅವರಿಗೆ ಟಿಕೆಟ್ ನೀಡಿಲ್ಲ. ಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆ’ ಎಂದು ಸಂತೋಷ್ ಬೆಂಬಲಿಗ ರಂಗನಾಥ್ ಹೇಳಿದರು.</p>.<p>ಈ ಮಧ್ಯೆ ಬೆಂಬಲಿಗರ ಜೊತೆ ಸಭೆ ನಡೆಸಿದ ಎನ್.ಆರ್. ಸಂತೋಷ್, ‘ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ. ಜೆಡಿಎಸ್ನಿಂದ ಬಿ.ಫಾರಂ ದೊರೆತಲ್ಲಿ ಜೆಡಿಎಸ್ನಿಂದ ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ‘ ಎಂದು ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಅರಸೀಕೆರೆ (ಹಾಸನ):</strong> ಕ್ಷೇತ್ರದಲ್ಲಿ ಎನ್.ಆರ್. ಸಂತೋಷ್ ಅವರಿಗೆ ಟಿಕೆಟ್ ತಪ್ಪಿದ್ದರಿಂದ ಆಕ್ರೋಶಗೊಂಡ ಬೆಂಬಲಿಗರು, ಬಿಜೆಪಿ ಬಾವುಟ ಸುಟ್ಟು ಹಾಕಿದರು. </p>.<p>ಬಿಜೆಪಿ ಫ್ಲೆಕ್ಸ್ಗಳನ್ನು ಹರಿದು ಹಾಕಿದ ಬೆಂಬಲಿಗರು, ಯಡಿಯೂರಪ್ಪ, ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದರು. ‘ಬಿಜೆಪಿ ಟಿಕೆಟ್ ನೀಡಿರುವ ಜಿ.ವಿ. ಬಸವರಾಜು 5 ಸಾವಿರ ಮತ ಪಡೆಯಲ್ಲ. ಇಡೀ ಅರಸೀಕೆರೆ ಕ್ಷೇತ್ರದಲ್ಲಿ ಬಿಜೆಪಿ ಹಾಳು ಮಾಡಿದ್ದಾರೆ’ ಎಂದು ಆರೋಪಿಸಿದರು.</p>.<p>‘ನಾನು ಎನ್.ಆರ್.ಸಂತೋಷ್ ಗೆಲ್ಲಲಿ ಎಂದು ಗಡ್ಡ ಬಿಟ್ಟಿದ್ದೆ. ಈಗ ಅವರಿಗೆ ಟಿಕೆಟ್ ನೀಡಿಲ್ಲ. ಬಿಜೆಪಿ ಸೋಲಲಿ ಎಂದು ಗಡ್ಡ ಬೋಳಿಸಿ ಬೆಂಗಳೂರಿನ ಬಿಜೆಪಿ ಕಚೇರಿಗೆ ಕಳುಹಿಸಿತ್ತೇನೆ’ ಎಂದು ಸಂತೋಷ್ ಬೆಂಬಲಿಗ ರಂಗನಾಥ್ ಹೇಳಿದರು.</p>.<p>ಈ ಮಧ್ಯೆ ಬೆಂಬಲಿಗರ ಜೊತೆ ಸಭೆ ನಡೆಸಿದ ಎನ್.ಆರ್. ಸಂತೋಷ್, ‘ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ. ಜೆಡಿಎಸ್ನಿಂದ ಬಿ.ಫಾರಂ ದೊರೆತಲ್ಲಿ ಜೆಡಿಎಸ್ನಿಂದ ಇಲ್ಲವೇ ಪಕ್ಷೇತರವಾಗಿ ಸ್ಪರ್ಧೆ ಮಾಡುತ್ತೇನೆ‘ ಎಂದು ತಿಳಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>