ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಫೆ.5 ರಂದು ಗ್ರಾಮದ ಬಿ.ಎನ್.ರಘುಕುಮಾರ್ ಮತ್ತು ಅದೇ ಗ್ರಾಮದ ಯುವತಿ ನಡುವೆ ವಿವಾಹವಾಗಿ, ಗುರುವಾರ ಬೀಗರ ಔತಣ ನಡೆಯಬೇಕಿತ್ತು. ಈಗ ಮಂಗಳ ಕಾರ್ಯ ನಿಂತು ಹೋಗಿದ್ದು, ಹುಡುಗ ನಾಪತ್ತೆಯಾಗಿದ್ದಾನೆ. ಶುಭಕಾರ್ಯಕ್ಕೆ ಬಂದಿದ್ದ ನೆಂಟರಿಷ್ಟರು ನಿರಾಶೆಯಿಂದ ಬಂದ ದಾರಿಕೆ ಸುಂಕವಿಲ್ಲ ಎಂಬಂತೆ ಮರಳಿದ್ದಾರೆ.