ವಿದೇಶಿ ನೇರ ಬಂಡವಾಳ ಹೂಡಿಕೆಗೆ ಸಂಪೂರ್ಣವಾಗಿ ಬಾಗಿಲು ತೆರೆಯುವ ಮೂಲಕ ಸಾಮ್ರಾಜ್ಯಶಾಹಿ, ಅಂತರರಾಷ್ಟ್ರೀಯ ಹಣಕಾಸು ಮತ್ತು ಕಾರ್ಪೊರೇಟ್ ಶಕ್ತಿಗಳಿಗೆ ಗುಲಾಮನಂತೆ ಸಂಪೂರ್ಣ ಶರಣಾಗಲಾಗಿದೆ. ಬಂಡವಾಳಶಾಹಿ ವ್ಯವಸ್ಥೆ ಗಟ್ಟಿಗೊಳಿಸಲು ಜನರನ್ನು ಜಾತಿ, ಮತ ಮತ್ತು ಧರ್ಮದ ಆಧಾರದಲ್ಲಿ ವಿಭಜಿಸಲಾಗುತ್ತಿದೆ. ವಿಚಾರವಾದಿಗಳ ಮೇಲೆ ದಾಳಿ ನಡೆಸುವ ಮೂಲಕ ಸಣ್ಣ ಪ್ರತಿರೋಧವನ್ನೂ ಸಹಿಸದ ನಿರಂಕುಶ ಆಡಳಿತದತ್ತ ದೇಶ ಸಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.