<p><strong>ಹಾಸನ</strong>: ಸಿ.ಟಿ ಸ್ಕ್ಯಾನ್ಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ<br />ಜಿಲ್ಲೆಯ ನಾಲ್ಕು ಖಾಸಗಿ ಸಂಸ್ಥೆಗಳಿಗೆ ತಲಾ ₹10 ಸಾವಿರ ದಂಡ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ<br />ಆರ್.ಗಿರೀಶ್ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾಸನ ನಗರದ ಯುನಿಟಿ ಸ್ಕ್ಯಾನ್ ಸೆಂಟರ್,<br />ಜನಪ್ರಿಯ ಆಸ್ಪತ್ರೆಯ ಸಿ.ಟಿ ಸ್ಕ್ಯಾನ್, ಎಸ್ಎಸ್ಎಂ ಆಸ್ಪತ್ರೆಯ ಸಿ.ಟಿ ಸ್ಕ್ಯಾನ್, ಚನ್ನರಾಯಪಟ್ಟಣ ನಗರದ ಹೈಟೆಕ್<br />ಸ್ಕ್ಯಾನಿಂಗ್ ಸೆಂಟರ್ಗೆ ನೋಟಿಸ್ ಜಾರಿ ಮಾಡಿ, 24 ತಾಸಿನೊಳಗೆ ಖುದ್ದು ಹಾಜರಾಗಿ ಉತ್ತರ ನೀಡಲು<br />ಸೂಚಿಸಲಾಗಿತ್ತು. ಆದರೆ ಯಾರು ಲಿಖತ ಉತ್ತರ ನೀಡಲಿಲ್ಲ. ಹಾಗಾಗಿ ಹಾಸನ ತಹಶೀಲ್ದಾರ್ ಮತ್ತು<br />ಚನ್ನರಾಯಪಟ್ಟಣ ತಾಲ್ಲೂಕು ಆರೋಗ್ಯಾಧಿಕಾರಿ ನೀಡಿದ ವರಿದ ಸತ್ಯವಾಗಿರುವುದು ಮೇಲ್ನೋಟಕ್ಕೆ ಕಂಡು<br />ಬಂದಿದೆ.</p>.<p>ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020 ಹಾಗೂ ಕರ್ನಾಟಕ ಪ್ರೈವೇಟ್ ಮೆಡಿಕಲ್<br />ಎಸ್ಟಾಬ್ಲಿಷ್ಮೆಂಟ್ ಕಾಯ್ದೆ 2007 ರ ಪ್ರಕಾರ ನಾಲ್ಕು ಸಂಸ್ಥೆಗಳಿಗೆ ತಲಾ ಹತ್ತು ಸಾವಿರ ರೂಪಾಯಿ ದಂಡ<br />ವಿಧಿಸಿವುದರ ಜತೆಗೆ ಹೆಚ್ಚುವರಿ ಪಡೆದ ಹಣದ ಒಂದೂವರೆ ಪಟ್ಟು ಹಣವನ್ನು ವಸೂಲಿ ಮಾಡಲಾಗಿದೆ ಎಂದು<br />ಹೇಳಿದರು.</p>.<p>ಹೆಚ್ಚುವರಿ ಪಡೆದ ಹಣವನ್ನು ರೋಗಿಗೆ ಹಿಂದಿರುಗಿಸಬೇಕು ಹಾಗೂ ಉಳಿದ ಮೊತ್ತವನ್ನು ಆರೋಗ್ಯ ರಕ್ಷಣ ಸಮಿತಿಗೆ<br />ಪಾವತಿಸಲು ಆದೇಶಿಸಲಾಗಿದೆ. ಮತ್ತೊಮ್ಮೆ ಈ ರೀತಿ ಪ್ರಕರಣ ಮರುಕಳಿಸಿದರೆ ಸಂಬಂಧಪಟ್ಟ ಸ್ಕ್ಯಾನಿಂಗ್<br />ಸೆಂಟರ್ ಮುಚ್ಚಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.</p>.<p>ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಅಧಿಕಾರಿಗಳ<br />ತಂಡವನ್ನು ನಿಯೋಜಿಸಿ ಬಿಲ್ ಆಡಿಟ್ ನಡೆಸಿ, ಎರಡು ದಿನದಲ್ಲಿ ಅಂತಹವರ ವಿರುದ್ಧವೂ ಕ್ರಮ ಗೊಳ್ಳಲಾಗುವುದು<br />ಎಂದು ತಿಳಿಸಿದರು</p>.<p>ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕುವಾರು ಕೋವಿಡ್ ಕೇರ್ ಸೆಂಟರ್ ಗಳನ್ನು<br />ಪ್ರಾರಂಭಿಸಲಾಗಿದೆ. ಸಾರ್ವಜನಿಕರಲ್ಲಿ ಯಾವುದೇ ರೀತಿಯ ಕೋವಿಡ್ ಲಕ್ಷಣಗಳು ಕಂಡು ಬಂದರೆ ತಪಾಸಣೆ<br />ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಖಾಸಗಿ ಸಂಘ ಸಂಸ್ಥೆಗಳೂ ಕೋವಿಡ್ ಕೇರ್ ಸೆಂಟರ್ ತೆರೆಯಲು ಮುಂದಾದರೆ ಜಿಲ್ಲಾಡಳಿತದಿಂದ ಅಗತ್ಯ<br />ವೈದ್ಯಕೀಯ ಸೌಲಭ್ಯ ಹಾಗೂ ಔಷಧ ಒದಗಿಸಲಾಗುತ್ತದೆ. ಸರ್ಕಾರರಿಂದ ಎಸ್ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ<br />300 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲಾಗಿದೆ ಎಂದರು.</p>.<p>ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 46 ಆಮ್ಲಜನಕ ಬೆಡ್ ಗಳು ಖಾಲಿ ಇವೆ. ಪ್ರತಿನಿತ್ಯ 10 ರಿಂದ 11ಕೆ.ಎಲ್ ಆಮ್ಲಜನಕ ಹಿಮ್ಸ್ ಗೆ ಸರಬರಾಜಾಗುತ್ತದೆ. ಹೆಚ್ಚುವರಿಯಾಗಿ 3 ಕೆ.ಎಲ್ ಗೆ ಸರ್ಕಾರಕ್ಕೆ ಪ್ರಸ್ತಾವನೆ<br />ಸಲ್ಲಿಸಲಾಗಿದೆ. ಅದು ಅನುಮೋದನೆ ಹಂತದಲ್ಲಿದೆ ಎಂದು ತಿಳಿಸಿದರು.</p>.<p>ಸೋಂಕಿತರಿಗೆ ಮನೆಯಲ್ಲಿ ಪ್ರತ್ಯೇಕ ಕೊಠಡಿ ಇಲ್ಲದಿದ್ದರೆ ಕೋವಿಡ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಬಹುದು. ಅಂತವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಕರೆತರಲು ಆಶಾ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ</strong>: ಸಿ.ಟಿ ಸ್ಕ್ಯಾನ್ಗೆ ಸರ್ಕಾರ ನಿಗದಿಪಡಿಸಿದ ದರಕ್ಕಿಂತ ಹೆಚ್ಚು ಹಣ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ<br />ಜಿಲ್ಲೆಯ ನಾಲ್ಕು ಖಾಸಗಿ ಸಂಸ್ಥೆಗಳಿಗೆ ತಲಾ ₹10 ಸಾವಿರ ದಂಡ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ<br />ಆರ್.ಗಿರೀಶ್ ತಿಳಿಸಿದರು.</p>.<p>ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಹಾಸನ ನಗರದ ಯುನಿಟಿ ಸ್ಕ್ಯಾನ್ ಸೆಂಟರ್,<br />ಜನಪ್ರಿಯ ಆಸ್ಪತ್ರೆಯ ಸಿ.ಟಿ ಸ್ಕ್ಯಾನ್, ಎಸ್ಎಸ್ಎಂ ಆಸ್ಪತ್ರೆಯ ಸಿ.ಟಿ ಸ್ಕ್ಯಾನ್, ಚನ್ನರಾಯಪಟ್ಟಣ ನಗರದ ಹೈಟೆಕ್<br />ಸ್ಕ್ಯಾನಿಂಗ್ ಸೆಂಟರ್ಗೆ ನೋಟಿಸ್ ಜಾರಿ ಮಾಡಿ, 24 ತಾಸಿನೊಳಗೆ ಖುದ್ದು ಹಾಜರಾಗಿ ಉತ್ತರ ನೀಡಲು<br />ಸೂಚಿಸಲಾಗಿತ್ತು. ಆದರೆ ಯಾರು ಲಿಖತ ಉತ್ತರ ನೀಡಲಿಲ್ಲ. ಹಾಗಾಗಿ ಹಾಸನ ತಹಶೀಲ್ದಾರ್ ಮತ್ತು<br />ಚನ್ನರಾಯಪಟ್ಟಣ ತಾಲ್ಲೂಕು ಆರೋಗ್ಯಾಧಿಕಾರಿ ನೀಡಿದ ವರಿದ ಸತ್ಯವಾಗಿರುವುದು ಮೇಲ್ನೋಟಕ್ಕೆ ಕಂಡು<br />ಬಂದಿದೆ.</p>.<p>ಕರ್ನಾಟಕ ಸಾಂಕ್ರಮಿಕ ರೋಗಗಳ ಕಾಯ್ದೆ 2020 ಹಾಗೂ ಕರ್ನಾಟಕ ಪ್ರೈವೇಟ್ ಮೆಡಿಕಲ್<br />ಎಸ್ಟಾಬ್ಲಿಷ್ಮೆಂಟ್ ಕಾಯ್ದೆ 2007 ರ ಪ್ರಕಾರ ನಾಲ್ಕು ಸಂಸ್ಥೆಗಳಿಗೆ ತಲಾ ಹತ್ತು ಸಾವಿರ ರೂಪಾಯಿ ದಂಡ<br />ವಿಧಿಸಿವುದರ ಜತೆಗೆ ಹೆಚ್ಚುವರಿ ಪಡೆದ ಹಣದ ಒಂದೂವರೆ ಪಟ್ಟು ಹಣವನ್ನು ವಸೂಲಿ ಮಾಡಲಾಗಿದೆ ಎಂದು<br />ಹೇಳಿದರು.</p>.<p>ಹೆಚ್ಚುವರಿ ಪಡೆದ ಹಣವನ್ನು ರೋಗಿಗೆ ಹಿಂದಿರುಗಿಸಬೇಕು ಹಾಗೂ ಉಳಿದ ಮೊತ್ತವನ್ನು ಆರೋಗ್ಯ ರಕ್ಷಣ ಸಮಿತಿಗೆ<br />ಪಾವತಿಸಲು ಆದೇಶಿಸಲಾಗಿದೆ. ಮತ್ತೊಮ್ಮೆ ಈ ರೀತಿ ಪ್ರಕರಣ ಮರುಕಳಿಸಿದರೆ ಸಂಬಂಧಪಟ್ಟ ಸ್ಕ್ಯಾನಿಂಗ್<br />ಸೆಂಟರ್ ಮುಚ್ಚಿಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.</p>.<p>ಕೆಲವು ಖಾಸಗಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಅಧಿಕಾರಿಗಳ<br />ತಂಡವನ್ನು ನಿಯೋಜಿಸಿ ಬಿಲ್ ಆಡಿಟ್ ನಡೆಸಿ, ಎರಡು ದಿನದಲ್ಲಿ ಅಂತಹವರ ವಿರುದ್ಧವೂ ಕ್ರಮ ಗೊಳ್ಳಲಾಗುವುದು<br />ಎಂದು ತಿಳಿಸಿದರು</p>.<p>ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕುವಾರು ಕೋವಿಡ್ ಕೇರ್ ಸೆಂಟರ್ ಗಳನ್ನು<br />ಪ್ರಾರಂಭಿಸಲಾಗಿದೆ. ಸಾರ್ವಜನಿಕರಲ್ಲಿ ಯಾವುದೇ ರೀತಿಯ ಕೋವಿಡ್ ಲಕ್ಷಣಗಳು ಕಂಡು ಬಂದರೆ ತಪಾಸಣೆ<br />ಮಾಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.</p>.<p>ಖಾಸಗಿ ಸಂಘ ಸಂಸ್ಥೆಗಳೂ ಕೋವಿಡ್ ಕೇರ್ ಸೆಂಟರ್ ತೆರೆಯಲು ಮುಂದಾದರೆ ಜಿಲ್ಲಾಡಳಿತದಿಂದ ಅಗತ್ಯ<br />ವೈದ್ಯಕೀಯ ಸೌಲಭ್ಯ ಹಾಗೂ ಔಷಧ ಒದಗಿಸಲಾಗುತ್ತದೆ. ಸರ್ಕಾರರಿಂದ ಎಸ್ಡಿಎಂ ಆಯುರ್ವೇದ ಆಸ್ಪತ್ರೆಯಲ್ಲಿ<br />300 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಪ್ರಾರಂಭಿಸಲಾಗಿದೆ ಎಂದರು.</p>.<p>ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 46 ಆಮ್ಲಜನಕ ಬೆಡ್ ಗಳು ಖಾಲಿ ಇವೆ. ಪ್ರತಿನಿತ್ಯ 10 ರಿಂದ 11ಕೆ.ಎಲ್ ಆಮ್ಲಜನಕ ಹಿಮ್ಸ್ ಗೆ ಸರಬರಾಜಾಗುತ್ತದೆ. ಹೆಚ್ಚುವರಿಯಾಗಿ 3 ಕೆ.ಎಲ್ ಗೆ ಸರ್ಕಾರಕ್ಕೆ ಪ್ರಸ್ತಾವನೆ<br />ಸಲ್ಲಿಸಲಾಗಿದೆ. ಅದು ಅನುಮೋದನೆ ಹಂತದಲ್ಲಿದೆ ಎಂದು ತಿಳಿಸಿದರು.</p>.<p>ಸೋಂಕಿತರಿಗೆ ಮನೆಯಲ್ಲಿ ಪ್ರತ್ಯೇಕ ಕೊಠಡಿ ಇಲ್ಲದಿದ್ದರೆ ಕೋವಿಡ್ ಸೆಂಟರ್ ಗಳಲ್ಲಿ ಚಿಕಿತ್ಸೆ ಪಡೆಯಬಹುದು. ಅಂತವರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ಕರೆತರಲು ಆಶಾ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>