ಅರಸೀಕೆರೆ ತಾಲ್ಲೂಕಿನ ಬಾಗೇಶಪುರ ಪಂಚಾಯಿತಿಯಲ್ಲಿ ಮೊದಲ ಬಾರಿಗೆ ಮತ ಚಲಾಯಿಸಿದ ಕಾವ್ಯ, ‘ಚುನಾವಣೆಗಳಕುರಿತು ಕೇವಲ ಪಠ್ಯದಲ್ಲಿ ಓದಿದ್ದೆ. ಮೊದಲ ಬಾರಿ ಮತದಾನದಲ್ಲಿ ಭಾಗಿಯಾಗಿರುವುದು ತುಂಬಾ ಖುಷಿ ತಂದಿದೆ. ಪ್ರಜಾಪ್ರಭುತ್ವ ವ್ಯವಸ್ಥೆ ಯಶಸ್ವಿಯಾಗಬೇಕಾದರೆ ಸಂವಿಧಾನ ನೀಡಿರುವ ಮತದಾನದ ಹಕ್ಕನ್ನು ಪ್ರತಿಯೊಬ್ಬರೂ ತಪ್ಪದೇ ಚಲಾಯಿಸಬೇಕು’ ಎಂದು ಅಭಿಪ್ರಾಯಪಟ್ಟರು.