‘ಗೆದ್ದ ಹಣವನ್ನು ಶಿಕ್ಷಣಕ್ಕೆ ಬಳಸಿಕೊಳ್ಳಬೇಕು ಮತ್ತು ಉದ್ಯೋಗ ಖಾತ್ರಿ ಯೋಜನೆಯಡಿ ಶಾಲೆಯ ಕಾಂಪೌಂಡ್ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವಂತೆ’ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ.ಪರಮೇಶ್ ಮತ್ತು ಪ್ರಕಾಶ್ಗೆ ಸೂಚನೆ ನೀಡಿರುವುದಾಗಿ ಸುರೇಶ್ ಕುಮಾರ್ ಅವರು ಟ್ವಿಟ್ ಮಾಡಿದ್ದಾರೆ.
ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರೇಶ್ ಜತೆಗೆ ಶಾಲೆಗೆ ಭೇಟಿ ನೀಡಿದ ಡಿಡಿಪಿಐ ಪ್ರಕಾಶ್, ಜಿಲ್ಲಾ ಪಂಚಾಯಿತಿ ವತಿಯಿಂದ ₹ 20 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಿಸಿಕೊಡಲಾಗುವುದು. ಕನ್ನಡದ ಕೋಟ್ಯಧಿಪತಿಯಲ್ಲಿ ಗೆದ್ದಿರುವ ಹಣವನ್ನು ಮುಂದಿನ ವಿದ್ಯಾಭ್ಯಾಸ ಹಾಗೂ ಅಕ್ಕನ ಮದುವೆಗೆ ಬಳಸಿಕೊಳ್ಳುವಂತೆ ತೇಜಸ್ಗೆ ಪ್ರಕಾಶ್ ಹೇಳಿದರು.