ಸಕಲೇಶಪುರ: ಮಳೆ ಸಾಧಾರಣವಾಗಿ ಸುರಿದರೂ ಭಾರೀ ಗಾಳಿಯಿಂದಾಗಿ ತಾಲ್ಲೂಕಿನ ಶಿರಾಡಿ ಘಾಟ್ನ್ ಗುಂಡ್ಯಾ ಹಾಗೂ ಮಾರನಹಳ್ಳಿ ನಡುವಿನ ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸೋಮವಾರ ಬೆಳಿಗ್ಗೆ ಭಾರೀ ಗಾತ್ರದ ಮರವೊಂದು ರಸ್ತೆಗೆ ಉರುಳಿ ಬಿದ್ದ ಪರಿಣಾಮ ಈ ಮಾರ್ಗದ ವಾಹನಗಳ ಸಂಚಾರ ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಂದ್ ಆಗಿತ್ತು.
ಗ್ರಾಮಾಂತರ ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮಾರನಹಳ್ಳಿ ಗ್ರಾಮದ ಕೆಲ ಗ್ರಾಮಸ್ಥರ ನೆರವಿನಿಂದ ರಸ್ತೆಗೆ ಬಿದ್ದಿದ್ದ ಮರವನ್ನು ತೆರವುಗೊಳಿಸಿ ಸಂಚಾರ ಸುಗಮಗೊಳಿಸಲಾಯಿತು.