ರಾಜ್ಯಕ್ಕೆ ಮುಂಗಾರು ಪ್ರವೇಶವಾಗಲಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾದರೆ, ಅದನ್ನು ಹೇಗೆ ನಿಭಾಯಿಸಬೇಕು ಎಂಬ ಬಗ್ಗೆ ಒಳಾಡಳಿತ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜ್ ಕುಮಾರ್ ಕತ್ರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಜಿಲ್ಲಾಧಿಕಾರಿ ಸೇರಿದಂತೆ ಪ್ರಮುಖ ಅಧಿಕಾರಿಗಳ ಸಭೆ ನಡೆಸಿ, ಯಾವ ರೀತಿ ಸನ್ನದ್ಧರಾಗಿರಬೇಕು ಎಂದು ಸೂಚಿಸಿದರು.