ಹಾಸನ: ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರು ನಾಟಕದ ಡೈಲಾಗ್ ಹೇಳಿರುವ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.
ಅರಸೀಕೆರೆ ತಾಲ್ಲೂಕಿನ ಬೆಟ್ಟದಪುರ ಗ್ರಾಮದಲ್ಲಿ ಸೋಮವಾರ ರಾತ್ರಿ ಕುರುಕ್ಷೇತ್ರ ನಾಟಕ ಪ್ರದರ್ಶನ ಹಮ್ಮಿಕೊಳ್ಳಲಾಗಿತ್ತು. ಉದ್ಘಾಟನೆಯ ಸಂದರ್ಭದಲ್ಲಿ ಕೈಯಲ್ಲಿ ಗದೆ ಹಿಡಿದು, ಕುರುಕ್ಷೇತ್ರ ನಾಟಕದ ಡೈಲಾಗ್ಗಳನ್ನು ಹೇಳುವ ಮೂಲಕ ಶಾಸಕ ಕೆ.ಎಂ. ಶಿವಲಿಂಗೇಗೌಡ, ಸಭಿಕರಿಂದ ಮೆಚ್ಚುಗೆ ಪಡೆದರು.
ಶಿವಲಿಂಗೇಗೌಡರ ಡೈಲಾಗ್ಗಳನ್ನು ಕೇಳಿದ ಪ್ರೇಕ್ಷಕರು, ಸಿಳ್ಳೆ ಹೊಡೆದು, ಚಪ್ಪಾಳೆ ಬಾರಿಸುವ ಮೂಲಕ ಹರ್ಷ ವ್ಯಕ್ತಪಡಿಸಿದರು. ಜೆಡಿಎಸ್ನಿಂದ ಆಯ್ಕೆಯಾಗಿರುವ ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡ, ಇದೀಗ ಪಕ್ಷದಿಂದ ಹೊರನಡೆದಿದ್ದು, ಕಾಂಗ್ರೆಸ್ ಸೇರ್ಪಡೆಗೆ ಸಿದ್ಧರಾಗಿದ್ದಾರೆ.