<p><strong>ಸಕಲೇಶಪುರ</strong>: ಇಲ್ಲಿನ ಹೊಳೆ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ಹಾಲಿನ ಅಭಿಷೇಕ, ಹೋಮ, ವಿಶೇಷ ಅಲಂಕಾರ, ಯಕ್ಷಗಾನ, ಅನ್ನಸಂತರ್ಪಣೆ ಸೇರಿದಂತೆ ನಿರಂತರ ಪೂಜೆ ಕಾರ್ಯಕ್ರಮಗಳು ನಡೆದವು.</p>.<p>ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ 1208 ಲೀಟರ್ ಹಾಲಿನ ಅಭಿಷೇಕ ನಡೆದರೆ, ಸಂಜೆ 5ರಿಂದ ಗುರುವಾರ ಬೆಳಿಗ್ಗೆ 4.30ರವರೆಗೆ ನಾಲ್ಕು ಯಾಮದ ಪೂಜೆ ನಡೆಯಿತು. ಪ್ರತಿ ಯಾಮದಲ್ಲಿಯೂ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ಉಪವಿಭಾಗಾಧಿಕಾರಿ ಎಂ.ಕೆ.ಶೃತಿ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಬಾಗೆ ಜೆಎಸ್ಎಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭದ್ರಾವತಿಯ ಲೋಕನಾಥ್ ಬ್ರದರ್ಸ್ ಅವರಿಂದ ಆರ್ಕೆಸ್ಟ್ರಾ, ನೃತ್ಯ ಹಾಗೂ ಮಿಮಿಕ್ರಿ, ಜೂನಿಯರ್ ರಾಜ್ಕುಮಾರ್ ಅವರಿಂದ ಕಾರ್ಯಕ್ರಮ ನಡೆದವು.</p>.<p>ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಕೃಪಾ ಪೋಷಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಬಪ್ಪನಾಡು ಮಹಾತ್ಮೆ ಎಂಬ ಪುಣ್ಯ ಕಥಾ ಭಾಗದ ಯಕ್ಷಗಾನ ಪ್ರದರ್ಶನ ನಡೆಯಿತು.</p>.<p>ಹೊಳೆಮಲ್ಲೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ದುಲ್ರಾಜ್ ಜೈನ್ ಹಾಗೂ ಟ್ರಸ್ಟ್ ಸದಸ್ಯರು ಇದ್ದರು.</p>.<p>3 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಸಂತರ್ಪಣೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಬಿ.ಎಂ ರಸ್ತೆ ಹಾಗೂ ಸಕಲೇಶ್ವರಸ್ವಾಮಿ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಜನರು ಪರದಾಡುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಕಲೇಶಪುರ</strong>: ಇಲ್ಲಿನ ಹೊಳೆ ಮಲ್ಲೇಶ್ವರಸ್ವಾಮಿ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಅಂಗವಾಗಿ ಹಾಲಿನ ಅಭಿಷೇಕ, ಹೋಮ, ವಿಶೇಷ ಅಲಂಕಾರ, ಯಕ್ಷಗಾನ, ಅನ್ನಸಂತರ್ಪಣೆ ಸೇರಿದಂತೆ ನಿರಂತರ ಪೂಜೆ ಕಾರ್ಯಕ್ರಮಗಳು ನಡೆದವು.</p>.<p>ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ 1208 ಲೀಟರ್ ಹಾಲಿನ ಅಭಿಷೇಕ ನಡೆದರೆ, ಸಂಜೆ 5ರಿಂದ ಗುರುವಾರ ಬೆಳಿಗ್ಗೆ 4.30ರವರೆಗೆ ನಾಲ್ಕು ಯಾಮದ ಪೂಜೆ ನಡೆಯಿತು. ಪ್ರತಿ ಯಾಮದಲ್ಲಿಯೂ ದೇವರಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು.</p>.<p>ಉಪವಿಭಾಗಾಧಿಕಾರಿ ಎಂ.ಕೆ.ಶೃತಿ ಸೇರಿದಂತೆ ಹಲವು ಗಣ್ಯರು, ಅಧಿಕಾರಿಗಳು ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.</p>.<p>ಬಾಗೆ ಜೆಎಸ್ಎಸ್ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಭದ್ರಾವತಿಯ ಲೋಕನಾಥ್ ಬ್ರದರ್ಸ್ ಅವರಿಂದ ಆರ್ಕೆಸ್ಟ್ರಾ, ನೃತ್ಯ ಹಾಗೂ ಮಿಮಿಕ್ರಿ, ಜೂನಿಯರ್ ರಾಜ್ಕುಮಾರ್ ಅವರಿಂದ ಕಾರ್ಯಕ್ರಮ ನಡೆದವು.</p>.<p>ಮೂಲ್ಕಿಯ ಬಪ್ಪನಾಡು ದುರ್ಗಾಪರಮೇಶ್ವರಿ ಕೃಪಾ ಪೋಷಿತ ದಶಾವತಾರ ಯಕ್ಷಗಾನ ಮಂಡಳಿಯವರಿಂದ ಬಪ್ಪನಾಡು ಮಹಾತ್ಮೆ ಎಂಬ ಪುಣ್ಯ ಕಥಾ ಭಾಗದ ಯಕ್ಷಗಾನ ಪ್ರದರ್ಶನ ನಡೆಯಿತು.</p>.<p>ಹೊಳೆಮಲ್ಲೇಶ್ವರಸ್ವಾಮಿ ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ದುಲ್ರಾಜ್ ಜೈನ್ ಹಾಗೂ ಟ್ರಸ್ಟ್ ಸದಸ್ಯರು ಇದ್ದರು.</p>.<p>3 ಸಾವಿರಕ್ಕೂ ಹೆಚ್ಚು ಮಂದಿಗೆ ಅನ್ನಸಂತರ್ಪಣೆ ನಡೆಯಿತು. ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರಿಂದ ನೂಕು ನುಗ್ಗಲು ಉಂಟಾಯಿತು. ಬಿ.ಎಂ ರಸ್ತೆ ಹಾಗೂ ಸಕಲೇಶ್ವರಸ್ವಾಮಿ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಜನರು ಪರದಾಡುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>