‘ರಾಜ್ಯದ ಜನ ನಮಗೆ ಬಾಂಡೆಡ್ ಲೇಬರ್ ಎಂದುಕೊಂಡಿದ್ದಾರೆ ಬಿಜೆಪಿಯವರು. ಆದರೆ, ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ತಕ್ಕಪಾಠ ಕಲಿಸುತ್ತಾರೆ’ ಎಂದು ಎಚ್ಚರಿಸಿದ ರೇವಣ್ಣ, ‘18 ಜನ ಸಂಸದರು ಇದ್ದುಕೊಂಡು ನಾಡಿನ ಪರ ಯಾವ ಹೋರಾಟ ಮಾಡಿದ್ದಾರೆ? ದೇವೇಗೌಡರು, ಕುಮಾರಸ್ವಾಮಿ ಅಧಿಕಾರದಲ್ಲಿದ್ದು ಏನು ಮಾಡಿದ್ದಾರೆ ಎಂಬುದರ ಬಗ್ಗೆ ಯಡಿಯೂರಪ್ಪ, ಶ್ರೀನಿವಾಸ್ ಪ್ರಸಾದ್ ಚರ್ಚೆಗೆ ಬರಲಿ’ ಎಂದು ಬಹಿರಂಗ ಸವಾಲು ಹಾಕಿದರು.