<p><strong>ಹಾಸನ:</strong> ನಗರದ ಹೊರವಲಯದ ಕೃಷ್ಣ ನಗರದಲ್ಲಿ ಮಂಗಳವಾರ ರಾತ್ರಿ ಗ್ರಾಮಾಂತರ ಠಾಣೆ ಪಿಎಸ್ಐ ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್ ಸುನಿಲ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.</p>.<p>ಗಾಯಗೊಂಡಿರುವ ಆರೋಪಿಗೆ ಹಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.</p>.<p>ಅರೆಕಲ್ಲು ಹೊಸಹಳ್ಳಿಯ ಸುನಿಲ್ ವಿರುದ್ಧ ಏಳು ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪಿಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಪ್ರಮುಖ ಆರೋಪಿ ಸುನಿಲ್ ಮತ್ತು ಆತನ ಸಹಚರರಾದ ಅರೆಕಲ್ಲು ಹೊಸಹಳ್ಳಿ ಸಂತೋಷ್, ದೊಡ್ಡ ಮಂಡಿಗನಹಳ್ಳಿ ಪ್ರತಾಪ್, ಸೂರಿ, ರವಿ, ಸಂತೋಷ್ ಹಾಗೂ ಆಲೂರು ತಾಲ್ಲೂಕಿನ ಸತೀಶ್ ಅ. 23ರಂದು ಮೂರು ಮಂದಿ ಮೇಲೆ ದಾಳಿ ಮಾಡಿ, ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.</p>.<p>ಪ್ರಕರಣದ ತನಿಖೆ ನಡೆಸುತ್ತಿದ್ದ ಪಿಎಸ್ಐ ಬಸವರಾಜ್, ಖಚಿತ ಮಾಹಿತಿ ಮೇರೆಗೆ ಆರೋಪಿಗಳು ಕೃಷ್ಣ ನಗರದ ಬಳಿ ಇರುವುದನ್ನು ದೃಢಪಡಿಸಿಕೊಂಡು ಬಂಧಿಸಲು ತೆರಳಿದ್ದರು.</p>.<p>ಮದ್ಯ ಸೇವಿಸುತ್ತಿದ್ದ ಆರೋಪಿಗಳು ಬಂಧಿಸಲು ಪಿಎಸ್ಐ ಮುಂದಾದಾಗ ಮೂವರು ಆರೋಪಿಗಳು ಪರಾರಿಯಾದರು. ಇಬ್ಬರನ್ನು ವಶಕ್ಕೆ ಪಡೆದರು.</p>.<p>ಸುನಿಲ್ ತಪ್ಪಿಸಿಕೊಳ್ಳಲು ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ. ಬಸವರಾಜ್ ಅವರ ಹೊಟ್ಟೆ ಮತ್ತು ಎಡಗೈಗೆ ಗಂಭೀರ ಗಾಯವಾಗಿದೆ. ರಕ್ಷಣೆಗಾಗಿ ಸ್ಥಳದಲ್ಲಿದ್ದ ಗ್ರಾಮಾಂತರ ವೃತ್ತದ ಸಿಪಿಐ ಪಿ.ಸುರೇಶ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ನಗರದ ಹೊರವಲಯದ ಕೃಷ್ಣ ನಗರದಲ್ಲಿ ಮಂಗಳವಾರ ರಾತ್ರಿ ಗ್ರಾಮಾಂತರ ಠಾಣೆ ಪಿಎಸ್ಐ ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿದ ರೌಡಿ ಶೀಟರ್ ಸುನಿಲ್ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ.</p>.<p>ಗಾಯಗೊಂಡಿರುವ ಆರೋಪಿಗೆ ಹಿಮ್ಸ್ ನಲ್ಲಿ ಚಿಕಿತ್ಸೆ ಕೊಡಿಸಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ.</p>.<p>ಅರೆಕಲ್ಲು ಹೊಸಹಳ್ಳಿಯ ಸುನಿಲ್ ವಿರುದ್ಧ ಏಳು ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಪಿಎಸ್ಐ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>.<p>ಪ್ರಮುಖ ಆರೋಪಿ ಸುನಿಲ್ ಮತ್ತು ಆತನ ಸಹಚರರಾದ ಅರೆಕಲ್ಲು ಹೊಸಹಳ್ಳಿ ಸಂತೋಷ್, ದೊಡ್ಡ ಮಂಡಿಗನಹಳ್ಳಿ ಪ್ರತಾಪ್, ಸೂರಿ, ರವಿ, ಸಂತೋಷ್ ಹಾಗೂ ಆಲೂರು ತಾಲ್ಲೂಕಿನ ಸತೀಶ್ ಅ. 23ರಂದು ಮೂರು ಮಂದಿ ಮೇಲೆ ದಾಳಿ ಮಾಡಿ, ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದರು.</p>.<p>ಪ್ರಕರಣದ ತನಿಖೆ ನಡೆಸುತ್ತಿದ್ದ ಪಿಎಸ್ಐ ಬಸವರಾಜ್, ಖಚಿತ ಮಾಹಿತಿ ಮೇರೆಗೆ ಆರೋಪಿಗಳು ಕೃಷ್ಣ ನಗರದ ಬಳಿ ಇರುವುದನ್ನು ದೃಢಪಡಿಸಿಕೊಂಡು ಬಂಧಿಸಲು ತೆರಳಿದ್ದರು.</p>.<p>ಮದ್ಯ ಸೇವಿಸುತ್ತಿದ್ದ ಆರೋಪಿಗಳು ಬಂಧಿಸಲು ಪಿಎಸ್ಐ ಮುಂದಾದಾಗ ಮೂವರು ಆರೋಪಿಗಳು ಪರಾರಿಯಾದರು. ಇಬ್ಬರನ್ನು ವಶಕ್ಕೆ ಪಡೆದರು.</p>.<p>ಸುನಿಲ್ ತಪ್ಪಿಸಿಕೊಳ್ಳಲು ಬಸವರಾಜ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ. ಬಸವರಾಜ್ ಅವರ ಹೊಟ್ಟೆ ಮತ್ತು ಎಡಗೈಗೆ ಗಂಭೀರ ಗಾಯವಾಗಿದೆ. ರಕ್ಷಣೆಗಾಗಿ ಸ್ಥಳದಲ್ಲಿದ್ದ ಗ್ರಾಮಾಂತರ ವೃತ್ತದ ಸಿಪಿಐ ಪಿ.ಸುರೇಶ್ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>