ಹಾಸನ: ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಬೇಕು ಎಂದು ರಾಜ್ಯ ಬಿಜೆಪಿ ಪ್ರಕೋಷ್ಟಗಳ ಸಂಯೋಜಕ ಭಾನುಪ್ರಕಾಶ್ ಹೇಳಿದರು.
ನಗರದ ಎಚ್.ಎಂ.ಟಿ. ಕಲ್ಯಾಣ ಮಂಟಪದಲ್ಲಿ ಭಾನುವಾರ ಬಿಜೆಪಿ ಆಯೋಜಿಸಿದ್ದ ಪ್ರಕೋಷ್ಟಗಳ ಜಿಲ್ಲಾ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ಪಕ್ಷವನ್ನು ಮತ್ತಷ್ಟು ಬಲಪಡಿಸಲು ಎಲ್ಲರೂ ಶ್ರಮಿಸಬೇಕು. ಕೇಂದ್ರದಲ್ಲಿ ನರೇಂದ್ರ ಮೋದಿ ಮತ್ತು ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ಸರ್ಕಾರ ಉತ್ತಮ ಕಾರ್ಯಕ್ರಮಗಳನ್ನು ನೀಡಿದೆ. ಬಡವರು, ಕೂಲಿ ಕಾರ್ಮಿಕರಿಗೆ ಸಾಕಷ್ಟು ಪ್ರಯೋಜನವಾಗಿದೆ ಎಂದರು.
ಜಲಧಾರೆ, ನೀರಿನ ಕೊಡ ಎತ್ತಿಕೊಂಡು ತಿರುಗುವುದು ಬಿಜೆಪಿಯಲ್ಲಿ ಇಲ್ಲ. ಬಿಜೆಪಿಗೆ ದೇಶ ಮೊದಲು. ಪ್ರಶಿಕ್ಷಣದ ಮೂಲಕ ಉತ್ತಮ ಸಂಸ್ಕೃತಿಯನ್ನು ಕಾರ್ಯಕರ್ತರಿಗೆ ಕೊಡಲಾಗುತ್ತಿದೆ. ಕೊಟ್ಟ ಮಾತಿನಂತೆ ರಾಮಮಂದಿರ ನಿರ್ಮಾಣ ಮಾಡಲಾಗುತ್ತಿದೆ.ಮತ ಬ್ಯಾಂಕ್ಗಾಗಿಮಾಡಿಲ್ಲ. ದೇಶದ ಒಳಿತಿಗಾಗಿ ಹಲವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ಸಮಾವೇಶದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್,ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ಯೋಗೇಂದ್ರ, ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಕೆ. ಸುರೇಶ್, ಜಿಲ್ಲಾ ಪ್ರಕೋಷ್ಟಗಳ ಸಂಯೋಜಕ ಪ್ರಸನ್ನ ಇದ್ದರು.