ಶ್ರವಣಬೆಳಗೊಳದ ದಿಗಂಬರ ಜೈನಮಠದ ನೂತನ ಪೀಠಾಧಿಕಾರಿಯಾಗಿ ಸ್ವಸ್ತಿಶ್ರೀ ಆಗಮಕೀರ್ತಿ ಭಟ್ಟಾಕರ ಸ್ವಾಮೀಜಿಯವರ ಪಟ್ಟಾಭಿಷೇಕ ಮಹೋತ್ಸವವು ಸೋಮವಾರ ನೆರವೇರಿತು. ಸ್ವರ್ಗೀಯ ಸ್ವಸ್ತಿಶ್ರೀ ಕರ್ಮಯೋಗಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರಿಂದ ಉತ್ತರಾಧಿಕಾರಿಯಾಗಿ ನೇಮಕವಾಗಿರುವ ಶಿವಮೊಗ್ಗ ಜಿಲ್ಲೆಯ ಸಾಗರದ ಸ್ವಸ್ತಿಶ್ರೀ ಆಗಮಕೀರ್ತಿ ಸ್ವಾಮೀಜಿ, ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪಟ್ಟವನ್ನು ಅಲಂಕರಿಸಿದರು.