<p>ಶ್ರವಣಬೆಳಗೊಳ: ಕ್ಷೇತ್ರದ ಹೊರ ವಲಯದಲ್ಲಿರುವ ಚಾರುಗಿರಿ ಬೆಟ್ಟದಲ್ಲಿ ಶನಿವಾರ ಚಾರುಕೀರ್ತಿ ಶ್ರೀಗಳ 3ನೇ ವರ್ಷದ ಪುಣ್ಯಸ್ಮರಣೆಯ ನಡೆಯಿತು.</p>.<p>ಬೆಟ್ಟದ ಸಮಾಧಿ ಸ್ಥಳದಲ್ಲಿ ಶ್ರೀಗಳ ಪಾದುಕೆಗಳಿಗೆ ಅಭಿಷೇಕ, ಪುಷ್ಪಾರ್ಚನೆ ನೆರವೇರಿಸಲಾಯಿತು.</p>.<p>ಸಾನಿಧ್ಯ ವಹಿಸಿದ್ದ ಆಚಾರ್ಯ ಅನೇಕಾಂತ ಸಾಗರ ಮಹಾರಾಜರು, ‘ವೈರಾಗ್ಯ ಮೂರ್ತಿ ಭಗವಾನ್ ಬಾಹುಬಲಿಯ 4 ಮಹಾ ಮಸ್ತಕಾಭಿಷೇಕಗಳನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಚಾರುಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ. ಲೋಕಕ್ಕೆ ಬಾಹುಬಲಿಯ ತ್ಯಾಗ ವೈರಾಗ್ಯ ಶಾಂತಿ, ಅಹಿಂಸೆ, ಮೈತ್ರಿ ಭಾವವನ್ನು ಪರಿಚಯಿಸಿದ ಹೆಗ್ಗಳಿಕೆ ಅವರದು’ ಎಂದು ಹೇಳಿದರು.</p>.<p>‘ಶ್ರವಣಬೆಳಗೊಳದ ಬೆಳಕಾಗಿದ್ದ ಅವರು ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಭದ್ರ ಬುನಾದಿ ಹಾಕಿದ್ದರು. ಸರ್ವ ಧರ್ಮಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು’ ಎಂದರು.</p>.<p>ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಸೇರಿದಂತೆ ವಿವಿಧೆಡೆಯ ಭಕ್ತರು ಪಾಲ್ಗೊಂಡಿದ್ದರು.</p>.<p>ಗ್ರಾಮ ಪಂಚಾಯಿತಿಯ ಸದಸ್ಯ ಎಸ್.ಬಿ.ಯಶಸ್, ಆಡಳಿತ ಮಂಡಳಿಯ ಸದಸ್ಯರಾದ ಭರತೇಶ್, ಪೌದನ್, ಶ್ರೇಯಸ್, ಹೇಮಂತ್ ಕುಮಾರ್, ಜೈನ್ ಸಮಾಜದ ಅಧ್ಯಕ್ಷ ಪದ್ಮಕುಮಾರ್, ಕಾರ್ಯದರ್ಶಿ ಎಸ್.ಪಿ.ಬಾನುಕುಮಾರ್, ಸುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-36-1366980013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರವಣಬೆಳಗೊಳ: ಕ್ಷೇತ್ರದ ಹೊರ ವಲಯದಲ್ಲಿರುವ ಚಾರುಗಿರಿ ಬೆಟ್ಟದಲ್ಲಿ ಶನಿವಾರ ಚಾರುಕೀರ್ತಿ ಶ್ರೀಗಳ 3ನೇ ವರ್ಷದ ಪುಣ್ಯಸ್ಮರಣೆಯ ನಡೆಯಿತು.</p>.<p>ಬೆಟ್ಟದ ಸಮಾಧಿ ಸ್ಥಳದಲ್ಲಿ ಶ್ರೀಗಳ ಪಾದುಕೆಗಳಿಗೆ ಅಭಿಷೇಕ, ಪುಷ್ಪಾರ್ಚನೆ ನೆರವೇರಿಸಲಾಯಿತು.</p>.<p>ಸಾನಿಧ್ಯ ವಹಿಸಿದ್ದ ಆಚಾರ್ಯ ಅನೇಕಾಂತ ಸಾಗರ ಮಹಾರಾಜರು, ‘ವೈರಾಗ್ಯ ಮೂರ್ತಿ ಭಗವಾನ್ ಬಾಹುಬಲಿಯ 4 ಮಹಾ ಮಸ್ತಕಾಭಿಷೇಕಗಳನ್ನು ಯಶಸ್ವಿಯಾಗಿ ನಡೆಸಿದ ಕೀರ್ತಿ ಚಾರುಕೀರ್ತಿ ಶ್ರೀಗಳಿಗೆ ಸಲ್ಲುತ್ತದೆ. ಲೋಕಕ್ಕೆ ಬಾಹುಬಲಿಯ ತ್ಯಾಗ ವೈರಾಗ್ಯ ಶಾಂತಿ, ಅಹಿಂಸೆ, ಮೈತ್ರಿ ಭಾವವನ್ನು ಪರಿಚಯಿಸಿದ ಹೆಗ್ಗಳಿಕೆ ಅವರದು’ ಎಂದು ಹೇಳಿದರು.</p>.<p>‘ಶ್ರವಣಬೆಳಗೊಳದ ಬೆಳಕಾಗಿದ್ದ ಅವರು ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ಭದ್ರ ಬುನಾದಿ ಹಾಕಿದ್ದರು. ಸರ್ವ ಧರ್ಮಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು’ ಎಂದರು.</p>.<p>ಮೈಸೂರು, ಬೆಂಗಳೂರು, ಹಾಸನ, ಮಂಡ್ಯ ಸೇರಿದಂತೆ ವಿವಿಧೆಡೆಯ ಭಕ್ತರು ಪಾಲ್ಗೊಂಡಿದ್ದರು.</p>.<p>ಗ್ರಾಮ ಪಂಚಾಯಿತಿಯ ಸದಸ್ಯ ಎಸ್.ಬಿ.ಯಶಸ್, ಆಡಳಿತ ಮಂಡಳಿಯ ಸದಸ್ಯರಾದ ಭರತೇಶ್, ಪೌದನ್, ಶ್ರೇಯಸ್, ಹೇಮಂತ್ ಕುಮಾರ್, ಜೈನ್ ಸಮಾಜದ ಅಧ್ಯಕ್ಷ ಪದ್ಮಕುಮಾರ್, ಕಾರ್ಯದರ್ಶಿ ಎಸ್.ಪಿ.ಬಾನುಕುಮಾರ್, ಸುತ್ತಲಿನ ಗ್ರಾಮಸ್ಥರು ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260322-36-1366980013</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>