<p>ಶ್ರವಣಬೆಳಗೊಳ: ಕ್ರೀಡೆಗಳಲ್ಲಿ ಆಸಕ್ತಿಯಿಂದ ಭಾಗವಹಿಸುವುದರಿಂದ ಆಯಾಯ ಪ್ರದೇಶದ ಸಂಸ್ಕೃತಿಗಳ ಪರಿಚಯದೊಂದಿಗೆ ಒಳ್ಳೆಯ ಬಾಂಧವ್ಯ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಲಾವಣ್ಯ ಬಲ್ಲಾಳ್ ಹೇಳಿದರು.</p>.<p>ಗೊಮ್ಮಟ ನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಾಹುಬಲಿ ಜೈನ್ ಪ್ರೀಮಿಯರ್ ಲೀಗ್ ಕ್ರಿಕೆಟ್ನ ಸಮಾರೋಪ ಸಮಾರಂಭದಲ್ಲಿ ಬಹುಮಾನ ಟ್ರೋಫಿ ವಿತರಿಸಿ ಅವರು ಭಾನುವಾರ ಮಾತನಾಡಿದರು. ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದು ಹೇಳಿದರು.</p>.<p>ಆಯೋಜಕರಾದ ಕ್ರೀಡಾ ಮೇಲ್ವಿಚಾರಕ ಶ್ರೇಯಸ್ ಜೈನ್ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳ 15 ತಂಡಗಳು ಭಾಗವಹಿಸಿದ್ದವು ಎಂದರು. 2 ದಿನಗಳ ಕಾಲ ಜರುಗಿದ ಪಂದ್ಯ ಲೀಗ್ ಆಧಾರದಲ್ಲಿ ನಡೆದಿದ್ದು, ದಕ್ಷಿಣ ಕನ್ನಡದ ಅತಿಶಯ ನಲ್ಲೂರು ತಂಡ ಪ್ರಥಮ ಬಹುಮಾನ ₹58 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಉಜಿರೆಯ ಸೌಹಾರ್ದ ಕ್ರಿಕೆಟರ್ ತಂಡ ₹ 30 ಸಾವಿರ ನಗದು ಮತ್ತು ಟ್ರೋಫಿ, ತೃತೀಯ ಸ್ಥಾನ ತುಮಕೂರಿನ ಆದಿನಾಥ ಕ್ರಿಕೆಟರ್ ತಂಡ ₹20 ಸಾವಿರ ನಗದು ಮತ್ತು ಟ್ರೋಫಿ ಗಳಿಸಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಿ.ಸುನೀಲ್ ಕುಮಾರ್, ಕಾರ್ಯದರ್ಶಿ ಬಬನ್ ಪಿ ದತ್ತವಾಡೆ, ಆಡಳಿತ ಮಂಡಳಿಯ ಸದಸ್ಯರಾದ ಎಸ್.ವಿ.ಭರತೇಶ್, ಪೌದನ್ ಕುಮಾರ್, ರಾಜೇಶ್, ನೇಮೀಶ್, ಪ್ರದೀಪ್ ಹೆಗಡೆ ದಯಾನಂದ್, ಹೇಮಂತ್ ಕುಮಾರ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-36-598276083</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರವಣಬೆಳಗೊಳ: ಕ್ರೀಡೆಗಳಲ್ಲಿ ಆಸಕ್ತಿಯಿಂದ ಭಾಗವಹಿಸುವುದರಿಂದ ಆಯಾಯ ಪ್ರದೇಶದ ಸಂಸ್ಕೃತಿಗಳ ಪರಿಚಯದೊಂದಿಗೆ ಒಳ್ಳೆಯ ಬಾಂಧವ್ಯ ಬೆಳೆಯಲು ಸಹಕಾರಿಯಾಗುತ್ತದೆ ಎಂದು ಕಾಂಗ್ರೆಸ್ ನಾಯಕಿ ಲಾವಣ್ಯ ಬಲ್ಲಾಳ್ ಹೇಳಿದರು.</p>.<p>ಗೊಮ್ಮಟ ನಗರದ ಬಾಹುಬಲಿ ತಾಂತ್ರಿಕ ಮಹಾವಿದ್ಯಾಲಯದ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಬಾಹುಬಲಿ ಜೈನ್ ಪ್ರೀಮಿಯರ್ ಲೀಗ್ ಕ್ರಿಕೆಟ್ನ ಸಮಾರೋಪ ಸಮಾರಂಭದಲ್ಲಿ ಬಹುಮಾನ ಟ್ರೋಫಿ ವಿತರಿಸಿ ಅವರು ಭಾನುವಾರ ಮಾತನಾಡಿದರು. ಕ್ರೀಡೆಯಿಂದ ದೈಹಿಕ, ಮಾನಸಿಕ ಆರೋಗ್ಯ ಸುಧಾರಿಸುತ್ತದೆ ಎಂದು ಹೇಳಿದರು.</p>.<p>ಆಯೋಜಕರಾದ ಕ್ರೀಡಾ ಮೇಲ್ವಿಚಾರಕ ಶ್ರೇಯಸ್ ಜೈನ್ ಮಾತನಾಡಿ, ರಾಜ್ಯದ ವಿವಿಧ ಜಿಲ್ಲೆಗಳ 15 ತಂಡಗಳು ಭಾಗವಹಿಸಿದ್ದವು ಎಂದರು. 2 ದಿನಗಳ ಕಾಲ ಜರುಗಿದ ಪಂದ್ಯ ಲೀಗ್ ಆಧಾರದಲ್ಲಿ ನಡೆದಿದ್ದು, ದಕ್ಷಿಣ ಕನ್ನಡದ ಅತಿಶಯ ನಲ್ಲೂರು ತಂಡ ಪ್ರಥಮ ಬಹುಮಾನ ₹58 ಸಾವಿರ ನಗದು ಮತ್ತು ಟ್ರೋಫಿ, ದ್ವಿತೀಯ ಸ್ಥಾನ ಉಜಿರೆಯ ಸೌಹಾರ್ದ ಕ್ರಿಕೆಟರ್ ತಂಡ ₹ 30 ಸಾವಿರ ನಗದು ಮತ್ತು ಟ್ರೋಫಿ, ತೃತೀಯ ಸ್ಥಾನ ತುಮಕೂರಿನ ಆದಿನಾಥ ಕ್ರಿಕೆಟರ್ ತಂಡ ₹20 ಸಾವಿರ ನಗದು ಮತ್ತು ಟ್ರೋಫಿ ಗಳಿಸಿದೆ ಎಂದರು.</p>.<p>ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಿ.ಸುನೀಲ್ ಕುಮಾರ್, ಕಾರ್ಯದರ್ಶಿ ಬಬನ್ ಪಿ ದತ್ತವಾಡೆ, ಆಡಳಿತ ಮಂಡಳಿಯ ಸದಸ್ಯರಾದ ಎಸ್.ವಿ.ಭರತೇಶ್, ಪೌದನ್ ಕುಮಾರ್, ರಾಜೇಶ್, ನೇಮೀಶ್, ಪ್ರದೀಪ್ ಹೆಗಡೆ ದಯಾನಂದ್, ಹೇಮಂತ್ ಕುಮಾರ್ ಪಾಲ್ಗೊಂಡಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260603-36-598276083</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>