<p><strong>ಬೇಲೂರು</strong>: ಕಾಡಾನೆ ಉಪಟಳ ಇರುವ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಸಂಸದ ಶ್ರೇಯಸ್ ಪಟೇಲ್ ಭಾನುವಾರ ಭೇಟಿ ನೀಡಿದರು.</p>.<p>ಆನೆ ಕಾರ್ಯಪಡೆ ಕಚೇರಿಗೆ ಭೇಟಿ ನೀಡಿದ ಅವರು, ಅರಣ್ಯ ಇಲಾಖಾ ಅಧಿಕಾರಿಗಳು, ಆನೆ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ, ಕಾಡಾನೆ ಹಿಮ್ಮೆಟ್ಟಿಸುವ ಸಿಬ್ಬಂದಿ, ಕಾಫಿ ಬೆಳೆಗಾರರು, ಎನ್ಸಿಎಫ್ ತಂಡದೊಂದಿಗೆ ಸಮಾಲೋಚನೆ ನಡೆಸಿದರು.</p>.<p>ಕಾಡಾನೆ ಪತ್ತೆ ಹಚ್ಚುವುದು, ಕಾಡಾನೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸುವ ಬಗ್ಗೆ ಸ್ಥಳದಲ್ಲಿ ಮಾಹಿತಿ ಪಡೆದರು. ಈ ವೇಳೆ ಕಾಡಾನೆ ಹಿಮ್ಮೆಟ್ಟಿಸುವ ಸಿಬ್ಬಂದಿ ಕ್ಷೇತ್ರ ಮಟ್ಟದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು, ಉಳಿದ ಜಿಲ್ಲೆಗಳಿಗಿಂತ ಹಾಸನ ಜಿಲ್ಲೆಯಲ್ಲಿ ಕಾಡಾನೆ ಸಮಸ್ಯೆ ನಿರ್ವಹಣೆ ಭಿನ್ನವಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಇತ್ತೀಚೆಗೆ ಅರಣ್ಯ, ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದ ಥರ್ಮಲ್ ಡ್ರೋನ್ ವ್ಯವಸ್ಥೆಯನ್ನು ವೀಕ್ಷಿಸಿ, ಕಾಡಾನೆಗಳು ಇರುವ ಚಿತ್ರಗಳನ್ನು ಸೆರೆ ಹಿಡಿಯುವ ಕುರಿತು ಪ್ರಾತ್ಯಕ್ಷಿಕೆ ಪಡೆದರು.</p>.<p>ಎರಡನೇ ಬಾರಿಗೆ ಅರಣ್ಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ ಸಂಸದ ಶ್ರೇಯಸ್, ಕಾಡಾನೆ ಮಾನವ ಸಂಘರ್ಷ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಕೇಂದ್ರ ಅರಣ್ಯ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಿರುವುದಾಗಿ ತಿಳಿಸಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಸಹಾಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೋಹನ ವಿ.ಎಸ್., ಶರೀಫಾ, ವಲಯ ಅರಣ್ಯಾಧಿಕಾರಿ ಶ್ರೀ ಯತೀಶ್, ಬೇಲೂರು ಅರಣ್ಯ ಇಲಾಖೆಯ ಕ್ಷೇತ್ರ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇಲೂರು</strong>: ಕಾಡಾನೆ ಉಪಟಳ ಇರುವ ತಾಲ್ಲೂಕಿನ ವಿವಿಧ ಸ್ಥಳಗಳಿಗೆ ಸಂಸದ ಶ್ರೇಯಸ್ ಪಟೇಲ್ ಭಾನುವಾರ ಭೇಟಿ ನೀಡಿದರು.</p>.<p>ಆನೆ ಕಾರ್ಯಪಡೆ ಕಚೇರಿಗೆ ಭೇಟಿ ನೀಡಿದ ಅವರು, ಅರಣ್ಯ ಇಲಾಖಾ ಅಧಿಕಾರಿಗಳು, ಆನೆ ಕಾರ್ಯಪಡೆ, ಕ್ಷಿಪ್ರ ಕಾರ್ಯಪಡೆ, ಕಾಡಾನೆ ಹಿಮ್ಮೆಟ್ಟಿಸುವ ಸಿಬ್ಬಂದಿ, ಕಾಫಿ ಬೆಳೆಗಾರರು, ಎನ್ಸಿಎಫ್ ತಂಡದೊಂದಿಗೆ ಸಮಾಲೋಚನೆ ನಡೆಸಿದರು.</p>.<p>ಕಾಡಾನೆ ಪತ್ತೆ ಹಚ್ಚುವುದು, ಕಾಡಾನೆಗಳ ಬಗ್ಗೆ ಮಾಹಿತಿಯನ್ನು ಸಾರ್ವಜನಿಕರಿಗೆ ಒದಗಿಸುವ ಬಗ್ಗೆ ಸ್ಥಳದಲ್ಲಿ ಮಾಹಿತಿ ಪಡೆದರು. ಈ ವೇಳೆ ಕಾಡಾನೆ ಹಿಮ್ಮೆಟ್ಟಿಸುವ ಸಿಬ್ಬಂದಿ ಕ್ಷೇತ್ರ ಮಟ್ಟದಲ್ಲಿ ಎದುರಿಸುತ್ತಿರುವ ಸಮಸ್ಯೆಗಳು, ಉಳಿದ ಜಿಲ್ಲೆಗಳಿಗಿಂತ ಹಾಸನ ಜಿಲ್ಲೆಯಲ್ಲಿ ಕಾಡಾನೆ ಸಮಸ್ಯೆ ನಿರ್ವಹಣೆ ಭಿನ್ನವಾಗಿರುವ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದರು.</p>.<p>ಇತ್ತೀಚೆಗೆ ಅರಣ್ಯ, ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಿದ ಥರ್ಮಲ್ ಡ್ರೋನ್ ವ್ಯವಸ್ಥೆಯನ್ನು ವೀಕ್ಷಿಸಿ, ಕಾಡಾನೆಗಳು ಇರುವ ಚಿತ್ರಗಳನ್ನು ಸೆರೆ ಹಿಡಿಯುವ ಕುರಿತು ಪ್ರಾತ್ಯಕ್ಷಿಕೆ ಪಡೆದರು.</p>.<p>ಎರಡನೇ ಬಾರಿಗೆ ಅರಣ್ಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿದ ಸಂಸದ ಶ್ರೇಯಸ್, ಕಾಡಾನೆ ಮಾನವ ಸಂಘರ್ಷ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಕೇಂದ್ರ ಅರಣ್ಯ ಸಚಿವರಿಗೂ ಈ ಬಗ್ಗೆ ಮನವರಿಕೆ ಮಾಡಿರುವುದಾಗಿ ತಿಳಿಸಿದರು.</p>.<p>ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಭ್ ಕುಮಾರ್, ಸಹಾಯ ಅರಣ್ಯ ಸಂರಕ್ಷಣಾಧಿಕಾರಿಗಳಾದ ಮೋಹನ ವಿ.ಎಸ್., ಶರೀಫಾ, ವಲಯ ಅರಣ್ಯಾಧಿಕಾರಿ ಶ್ರೀ ಯತೀಶ್, ಬೇಲೂರು ಅರಣ್ಯ ಇಲಾಖೆಯ ಕ್ಷೇತ್ರ ಸಿಬ್ಬಂದಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>