<p><strong>ಹೊಳೆನರಸೀಪುರ</strong>: ಮಕ್ಕಳಿಗೆ ಸದಾ ಓದಿ,ಓದಿ ಎಂದು ಹೇಳದೆ ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡೆ, ಛಾಯಾಗ್ರಹಣದ ಬಗ್ಗೆ ಆಸಕ್ತಿ ಮೂಡಿಸಿ ಎಂದು ಸಂಸದ ಶ್ರೇಯಶ್ ಪಟೇಲ್ ಸಲಹೆ ನೀಡಿದರು.</p>.<p>ಭಾನುವಾರ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ಸ್ವಜಯ್ ಚಿತ್ರಕಲಾ ಅಕಾಡೆಮಿ ಭಾನುವಾರ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ವಿದ್ಯೆ ಒಂದೇ ನಮ್ಮ ಬದುಕನ್ನು ಪರಿಪೂರ್ಣಗೊಳಿಸುವುದಿಲ್ಲ. ವಿದ್ಯೆ ಜೊತೆಗೆ ವಿನಯ, ಸೌಜನ್ಯ, ವಿವಿಧ ಕಲೆಗಳ ಬಗ್ಗೆ ತಿಳಿದುಕೊಂಡಿರಬೇಕು ಎಂದರು.</p>.<p>ತಾಲ್ಲೂಕು ಮಟ್ಟದ ಸಬ್ಜೂನಿಯರ್, ಜೂನಿಯರ್, ಸೀನಿಯರ್ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ಚಿತ್ರ ಕಲಾವಿದ ದೇಸಾಯಿ ಅವರು ಕೆಲವೇ ನಿಮಿಷಗಳಲ್ಲಿ ಪರಿಸರದ ಚಿತ್ರ ಬಿಡಿಸಿ ಸೋಷಿಯಲ್ ಕ್ಲಬ್ಗೆ ಕೊಡುಗೆಯಾಗಿ ನೀಡಿದರು.</p>.<p>ವಿಜೇತರಿಗೆ ಸೋಷಿಯಲ್ ಕ್ಲಬ್ ಅಧ್ಯಕ್ಷ ಕೆ.ಎಂ. ಹೊನ್ನಪ್ಪ, ಕಾರ್ಯದರ್ಶಿ ಕೆ.ಆರ್. ಸುದರ್ಶನ್ಬಾಬು, ಶಂಕರ್ನಾರಾಯಣ್ ಏತಾಳ್, ಅಕಾಡೆಮಿಯ ಶಿಕ್ಷಕಿ ಶ್ವೇತಾ, ಅಜಯ್, ಸುಜಯ್ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ಮಕ್ಕಳಿಗೆ ಸದಾ ಓದಿ,ಓದಿ ಎಂದು ಹೇಳದೆ ಪಠ್ಯೇತರ ಚಟುವಟಿಕೆಗಳಾದ ಚಿತ್ರಕಲೆ, ಸಂಗೀತ, ಕ್ರೀಡೆ, ಛಾಯಾಗ್ರಹಣದ ಬಗ್ಗೆ ಆಸಕ್ತಿ ಮೂಡಿಸಿ ಎಂದು ಸಂಸದ ಶ್ರೇಯಶ್ ಪಟೇಲ್ ಸಲಹೆ ನೀಡಿದರು.</p>.<p>ಭಾನುವಾರ ಸೋಷಿಯಲ್ ಕ್ಲಬ್ ಸಭಾಂಗಣದಲ್ಲಿ ಸ್ವಜಯ್ ಚಿತ್ರಕಲಾ ಅಕಾಡೆಮಿ ಭಾನುವಾರ ಆಯೋಜಿಸಿದ್ದ ಚಿತ್ರಕಲಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ವಿದ್ಯೆ ಒಂದೇ ನಮ್ಮ ಬದುಕನ್ನು ಪರಿಪೂರ್ಣಗೊಳಿಸುವುದಿಲ್ಲ. ವಿದ್ಯೆ ಜೊತೆಗೆ ವಿನಯ, ಸೌಜನ್ಯ, ವಿವಿಧ ಕಲೆಗಳ ಬಗ್ಗೆ ತಿಳಿದುಕೊಂಡಿರಬೇಕು ಎಂದರು.</p>.<p>ತಾಲ್ಲೂಕು ಮಟ್ಟದ ಸಬ್ಜೂನಿಯರ್, ಜೂನಿಯರ್, ಸೀನಿಯರ್ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ವಿವಿಧ ಶಾಲೆಗಳ 250ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.</p>.<p>ಚಿತ್ರ ಕಲಾವಿದ ದೇಸಾಯಿ ಅವರು ಕೆಲವೇ ನಿಮಿಷಗಳಲ್ಲಿ ಪರಿಸರದ ಚಿತ್ರ ಬಿಡಿಸಿ ಸೋಷಿಯಲ್ ಕ್ಲಬ್ಗೆ ಕೊಡುಗೆಯಾಗಿ ನೀಡಿದರು.</p>.<p>ವಿಜೇತರಿಗೆ ಸೋಷಿಯಲ್ ಕ್ಲಬ್ ಅಧ್ಯಕ್ಷ ಕೆ.ಎಂ. ಹೊನ್ನಪ್ಪ, ಕಾರ್ಯದರ್ಶಿ ಕೆ.ಆರ್. ಸುದರ್ಶನ್ಬಾಬು, ಶಂಕರ್ನಾರಾಯಣ್ ಏತಾಳ್, ಅಕಾಡೆಮಿಯ ಶಿಕ್ಷಕಿ ಶ್ವೇತಾ, ಅಜಯ್, ಸುಜಯ್ ಬಹುಮಾನ ವಿತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>