<p><strong>ಹಾಸನ:</strong> ಜಿಲ್ಲೆಯಲ್ಲಿ ಒಟ್ಟು ₹ 1,344 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದೇವೆ. ಇದು ಟೀಕೆ ಮಾಡುವವರಿಗೆ ಉತ್ತರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳು ಇರಬೇಕು. ಆದರೆ, ಸತ್ಯಾಂಶಗಳನ್ನು ಇಟ್ಟುಕೊಂಡು ಟೀಕೆ ಮಾಡುವುದು ಆರೋಗ್ಯಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.</p><p> ₹62 ಸಾವಿರ ಕೋಟಿ ಹೆಚ್ಚಿನ ಆಯವ್ಯಯ ಮಂಡಿಸಿದ್ದೇವೆ. ಟೀಕೆ ಮಾಡುವವರು ವಸ್ತು ಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು. ಬಜೆಟ್ ಗಾತ್ರ ₹62 ಸಾವಿರ ಕೋಟಿ ಹೆಚ್ಚಾಗಿದೆ ಎಂದರೆ, ಅಲ್ಲಿ ಅಭಿವೃದ್ಧಿ ಕಾಮಗಾರಿಗಳು ಇರಬೇಕು. ₹ 1.20 ಲಕ್ಷ ಕೋಟಿಯನ್ನು ಅಭಿವೃದ್ಧಿಗೆ ಮೀಸಲಿಡುವ ಕೆಲಸ ಮಾಡಲಾಗಿದೆ. ಇದರಲ್ಲಿ ₹52 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ. ಇನ್ನೂ ₹68 ಸಾವಿರ ಕೋಟಿಯನ್ನು ವಿವಿಧ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಇಲ್ಲದೇ ಹೋದರೆ, ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ.</p><p><br>ಕಳೆದ ವರ್ಷ ₹25 ಲಕ್ಷ ಕೋಟಿ ಜಿಡಿಪಿ ಇದ್ದು, ಈ ವರ್ಷ ₹ 28 ಲಕ್ಷ ಕೋಟಿ ಇದೆ. ಅಭಿವೃದ್ಧಿ ಆಗದೇ ಇದ್ದರೆ, ಅಭಿವೃದ್ಧಿಗೆ ಹಣ ಇಲ್ಲದೇ ಹೋಗಿದ್ದರೆ, ಜಿಡಿಪಿಯಲ್ಲಿ ಬೆಳವಣಿಗೆ ಆಗಲು ಸಾಧ್ಯವಿರಲಿಲ್ಲ. ಇದನ್ನು ಪ್ರತಿಯೊಬ್ಬರೂ ಆಲೋಚನೆ ಮಾಡಬೇಕು ಎಂದರು. ಇಡೀ ದೇಶದಲ್ಲಿ ಜಿಎಸ್ಪಿ ಕೊಡುವುದರಲ್ಲಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಗುಜರಾತ್ ರಾಜ್ಯದಲ್ಲಿ ಶೇ 7–8 ರಷ್ಟಿದೆ. ಮಹಾರಾಷ್ಟ್ರ ಶೇ 14, ಭಾರತದ ಸರಾಸರಿ ಶೇ 16. ಆದರೆ, ಕರ್ನಾಟಕ ಪಾಲು ಶೇ 18 ರಷ್ಟಿದೆ. ಜಿಎಸ್ಟಿ ಹೆಚ್ಚಾಗಿರುವುದಕ್ಕೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂದರು.</p><p>ಹಾಸನ ಜಿಲ್ಲೆಯಲ್ಲಿ ₹166 ಕೋಟಿಯನ್ನು ಶಕ್ತಿ ಯೋಜನೆಗೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ₹477 ಕೋಟಿ ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ₹89 ಕೋಟಿ ಉಳಿತಾಯವಾಗಿದೆ. ಅನ್ನಭಾಗ್ಯ ಯೋಜನೆಯಡಿ ₹135 ಕೋಟಿ ನೀಡಲಾಗಿದೆ. ಯುವನಿಧಿಗೆ 790 ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ. ಈ ಹಣ ಫಲಾನುಭವಿಗಳಿಗೆ ಉಳಿತಾಯವಾಗಿದ್ದು, ಇದನ್ನು ಅವರು ಖರ್ಚು ಮಾಡಲು ಸಾಧ್ಯವಾಯಿತು. ಇದರಿಂದಲೇ ಜಿಎಸ್ಟಿ ಪಾವತಿ ರಾಜ್ಯದಲ್ಲಿ ಹೆಚ್ಚಾಗಿದೆ ಎಂದರು.</p><p>ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ದೇವಸ್ಥಾನಗಳಿಗೆ ಆದಾಯ ಹೆಚ್ಚಾಗಿದೆ ಎಂದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದಾರೆ ಎಂದು ಹೇಳಿದರು.</p><p>ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ ₹36 ಸಾವಿರ ಕೋಟಿ ಖರ್ಚು ಮಾಡಿದ್ದು, ಮುಂದಿನ ವರ್ಷ ₹59 ಸಾವಿರ ಕೋಟಿಯನ್ನು ಖರ್ಚು ಮಾಡಲಾಗುತ್ತಿದೆ. ಉಳಿತಾಯವಾಗುವ ಹಣ ಚಲಾವಣೆ ಆಗುತ್ತದೆ. ಇದರಿಂದ ಆರ್ಥಿಕ ಚಟುವಟಿಕೆ ಹೆಚ್ಚಾಗಲಿದೆ ಎಂದರು.<br>ಶೇ 50 ರಷ್ಟು ಮಹಿಳೆಯರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಇದರಲ್ಲಿ ಎಲ್ಲ ವರ್ಗದ, ಎಲ್ಲ ಧರ್ಮದ ಜನರಿದ್ದಾರೆ. ಇದರಲ್ಲಿ ಯಾವುದೇ ಭೇದ ಮಾಡುತ್ತಿಲ್ಲ ಎಂದರು.</p><p>ಹಾಸನ ವಿಮಾನ ನಿಲ್ದಾಣವನ್ನು ₹195 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ನಮ್ಮ ಸರ್ಕಾರ ಬಂದ ಮೇಲೆ ₹50 ಕೋಟಿ ನೀಡಲಾಗಿದೆ. ಇನ್ನೂ ₹30 ಕೋಟಿ ನೀಡುತ್ತೇವೆ. ರಿಂಗ್ ರಸ್ತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಾಸನದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ.</p><p>ಹಾಸನದ ಜನರು ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡು, ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು ಎಂದು ಹೇಳಿದರು.<br>ಅಭಿವೃದ್ಧಿಯಲ್ಲಿ ಯಾವುದೇ ರಾಜಕಾರಣವಿಲ್ಲ. ರಾಜ್ಯದ ಜನರ ತೆರಿಗೆ ಹಣವನ್ನೇ ನಾವು ಅಭಿವೃದ್ಧಿಗೆ ಕೊಡುತ್ತೇವೆ. ಇದನ್ನು ಕೇಳಿದರೆ, ಬಿಜೆಪಿಯವರಿಗೆ ಸಿಟ್ಟು. ಅದು ನರೇಂದ್ರ ಮೋದಿಯವರ ಹಣ. ಅದನ್ನು ಕೊಡಿ ಎಂದರೆ ಬಿಜೆಪಿಗೆ ಸಿಟ್ಟು ಎಂದು ತಿರುಗೇಟು ನೀಡಿದರು.<br>ಸಂವಿಧಾನದ ಉದ್ದೇಶಗಳಿಗೆ ಅನುಗುಣವಾಗಿ ಸರ್ಕಾರಗಳು ಕೆಲಸ ಮಾಡಬೇಕು. ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಬೇಕು.ಯಾವುದೇ ಧರ್ಮದ ಜನರನ್ನು ದ್ವೇಷಿಸಬಾರದು. ಎಲ್ಲರನ್ನೂ ಪ್ರೀತಿಸಬೇಕು. ಎಲ್ಲ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಬೇಕು. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ:</strong> ಜಿಲ್ಲೆಯಲ್ಲಿ ಒಟ್ಟು ₹ 1,344 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದ್ದೇವೆ. ಇದು ಟೀಕೆ ಮಾಡುವವರಿಗೆ ಉತ್ತರ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಟೀಕೆಗಳು ಇರಬೇಕು. ಆದರೆ, ಸತ್ಯಾಂಶಗಳನ್ನು ಇಟ್ಟುಕೊಂಡು ಟೀಕೆ ಮಾಡುವುದು ಆರೋಗ್ಯಕರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.</p><p>ನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಆವರಣದಲ್ಲಿ ಆಯೋಜಿಸಿದ್ದ ಅಭಿವೃದ್ಧಿ ಕಾಮಗಾರಿ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶದಲ್ಲಿ ಅವರು ಮಾತನಾಡಿದರು.</p><p> ₹62 ಸಾವಿರ ಕೋಟಿ ಹೆಚ್ಚಿನ ಆಯವ್ಯಯ ಮಂಡಿಸಿದ್ದೇವೆ. ಟೀಕೆ ಮಾಡುವವರು ವಸ್ತು ಸ್ಥಿತಿಯನ್ನು ಗಮನದಲ್ಲಿ ಇಟ್ಟುಕೊಂಡು ಮಾತನಾಡಬೇಕು. ಬಜೆಟ್ ಗಾತ್ರ ₹62 ಸಾವಿರ ಕೋಟಿ ಹೆಚ್ಚಾಗಿದೆ ಎಂದರೆ, ಅಲ್ಲಿ ಅಭಿವೃದ್ಧಿ ಕಾಮಗಾರಿಗಳು ಇರಬೇಕು. ₹ 1.20 ಲಕ್ಷ ಕೋಟಿಯನ್ನು ಅಭಿವೃದ್ಧಿಗೆ ಮೀಸಲಿಡುವ ಕೆಲಸ ಮಾಡಲಾಗಿದೆ. ಇದರಲ್ಲಿ ₹52 ಸಾವಿರ ಕೋಟಿ ಗ್ಯಾರಂಟಿ ಯೋಜನೆಗಳಿಗೆ ಮೀಸಲಿಡಲಾಗಿದೆ. ಇನ್ನೂ ₹68 ಸಾವಿರ ಕೋಟಿಯನ್ನು ವಿವಿಧ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಇಲ್ಲದೇ ಹೋದರೆ, ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ.</p><p><br>ಕಳೆದ ವರ್ಷ ₹25 ಲಕ್ಷ ಕೋಟಿ ಜಿಡಿಪಿ ಇದ್ದು, ಈ ವರ್ಷ ₹ 28 ಲಕ್ಷ ಕೋಟಿ ಇದೆ. ಅಭಿವೃದ್ಧಿ ಆಗದೇ ಇದ್ದರೆ, ಅಭಿವೃದ್ಧಿಗೆ ಹಣ ಇಲ್ಲದೇ ಹೋಗಿದ್ದರೆ, ಜಿಡಿಪಿಯಲ್ಲಿ ಬೆಳವಣಿಗೆ ಆಗಲು ಸಾಧ್ಯವಿರಲಿಲ್ಲ. ಇದನ್ನು ಪ್ರತಿಯೊಬ್ಬರೂ ಆಲೋಚನೆ ಮಾಡಬೇಕು ಎಂದರು. ಇಡೀ ದೇಶದಲ್ಲಿ ಜಿಎಸ್ಪಿ ಕೊಡುವುದರಲ್ಲಿ ಕರ್ನಾಟಕ ನಂಬರ್ 1 ಸ್ಥಾನದಲ್ಲಿದೆ. ಗುಜರಾತ್ ರಾಜ್ಯದಲ್ಲಿ ಶೇ 7–8 ರಷ್ಟಿದೆ. ಮಹಾರಾಷ್ಟ್ರ ಶೇ 14, ಭಾರತದ ಸರಾಸರಿ ಶೇ 16. ಆದರೆ, ಕರ್ನಾಟಕ ಪಾಲು ಶೇ 18 ರಷ್ಟಿದೆ. ಜಿಎಸ್ಟಿ ಹೆಚ್ಚಾಗಿರುವುದಕ್ಕೆ ಗ್ಯಾರಂಟಿ ಯೋಜನೆಗಳೇ ಕಾರಣ ಎಂದರು.</p><p>ಹಾಸನ ಜಿಲ್ಲೆಯಲ್ಲಿ ₹166 ಕೋಟಿಯನ್ನು ಶಕ್ತಿ ಯೋಜನೆಗೆ ನೀಡಲಾಗಿದೆ. ಗೃಹಲಕ್ಷ್ಮಿ ಯೋಜನೆಯಡಿ ₹477 ಕೋಟಿ ನೀಡಲಾಗಿದೆ. ಗೃಹಜ್ಯೋತಿ ಯೋಜನೆಯಡಿ ₹89 ಕೋಟಿ ಉಳಿತಾಯವಾಗಿದೆ. ಅನ್ನಭಾಗ್ಯ ಯೋಜನೆಯಡಿ ₹135 ಕೋಟಿ ನೀಡಲಾಗಿದೆ. ಯುವನಿಧಿಗೆ 790 ಫಲಾನುಭವಿಗಳಿಗೆ ವರ್ಗಾಯಿಸಲಾಗಿದೆ. ಈ ಹಣ ಫಲಾನುಭವಿಗಳಿಗೆ ಉಳಿತಾಯವಾಗಿದ್ದು, ಇದನ್ನು ಅವರು ಖರ್ಚು ಮಾಡಲು ಸಾಧ್ಯವಾಯಿತು. ಇದರಿಂದಲೇ ಜಿಎಸ್ಟಿ ಪಾವತಿ ರಾಜ್ಯದಲ್ಲಿ ಹೆಚ್ಚಾಗಿದೆ ಎಂದರು.</p><p>ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಿದೆ. ದೇವಸ್ಥಾನಗಳಿಗೆ ಆದಾಯ ಹೆಚ್ಚಾಗಿದೆ ಎಂದು ಧರ್ಮಸ್ಥಳದ ವೀರೇಂದ್ರ ಹೆಗ್ಗಡೆಯವರು ಪತ್ರ ಬರೆದಿದ್ದಾರೆ ಎಂದು ಹೇಳಿದರು.</p><p>ಗ್ಯಾರಂಟಿ ಯೋಜನೆಗಳಿಗೆ ಈ ವರ್ಷ ₹36 ಸಾವಿರ ಕೋಟಿ ಖರ್ಚು ಮಾಡಿದ್ದು, ಮುಂದಿನ ವರ್ಷ ₹59 ಸಾವಿರ ಕೋಟಿಯನ್ನು ಖರ್ಚು ಮಾಡಲಾಗುತ್ತಿದೆ. ಉಳಿತಾಯವಾಗುವ ಹಣ ಚಲಾವಣೆ ಆಗುತ್ತದೆ. ಇದರಿಂದ ಆರ್ಥಿಕ ಚಟುವಟಿಕೆ ಹೆಚ್ಚಾಗಲಿದೆ ಎಂದರು.<br>ಶೇ 50 ರಷ್ಟು ಮಹಿಳೆಯರಿಗೆ ಆರ್ಥಿಕ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದೇವೆ. ಇದರಲ್ಲಿ ಎಲ್ಲ ವರ್ಗದ, ಎಲ್ಲ ಧರ್ಮದ ಜನರಿದ್ದಾರೆ. ಇದರಲ್ಲಿ ಯಾವುದೇ ಭೇದ ಮಾಡುತ್ತಿಲ್ಲ ಎಂದರು.</p><p>ಹಾಸನ ವಿಮಾನ ನಿಲ್ದಾಣವನ್ನು ₹195 ಕೋಟಿ ವೆಚ್ಚದಲ್ಲಿ ನಿರ್ಮಿಸುತ್ತಿದ್ದು, ನಮ್ಮ ಸರ್ಕಾರ ಬಂದ ಮೇಲೆ ₹50 ಕೋಟಿ ನೀಡಲಾಗಿದೆ. ಇನ್ನೂ ₹30 ಕೋಟಿ ನೀಡುತ್ತೇವೆ. ರಿಂಗ್ ರಸ್ತೆಗೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಹಾಸನದ ಸರ್ವಾಂಗೀಣ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡುತ್ತೇವೆ.</p><p>ಹಾಸನದ ಜನರು ಗ್ಯಾರಂಟಿ ಯೋಜನೆಗಳನ್ನು ಬಳಸಿಕೊಂಡು, ಸಾಮಾಜಿಕ, ಆರ್ಥಿಕವಾಗಿ ಬೆಳೆಯಬೇಕು ಎಂದು ಹೇಳಿದರು.<br>ಅಭಿವೃದ್ಧಿಯಲ್ಲಿ ಯಾವುದೇ ರಾಜಕಾರಣವಿಲ್ಲ. ರಾಜ್ಯದ ಜನರ ತೆರಿಗೆ ಹಣವನ್ನೇ ನಾವು ಅಭಿವೃದ್ಧಿಗೆ ಕೊಡುತ್ತೇವೆ. ಇದನ್ನು ಕೇಳಿದರೆ, ಬಿಜೆಪಿಯವರಿಗೆ ಸಿಟ್ಟು. ಅದು ನರೇಂದ್ರ ಮೋದಿಯವರ ಹಣ. ಅದನ್ನು ಕೊಡಿ ಎಂದರೆ ಬಿಜೆಪಿಗೆ ಸಿಟ್ಟು ಎಂದು ತಿರುಗೇಟು ನೀಡಿದರು.<br>ಸಂವಿಧಾನದ ಉದ್ದೇಶಗಳಿಗೆ ಅನುಗುಣವಾಗಿ ಸರ್ಕಾರಗಳು ಕೆಲಸ ಮಾಡಬೇಕು. ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಬೇಕು.ಯಾವುದೇ ಧರ್ಮದ ಜನರನ್ನು ದ್ವೇಷಿಸಬಾರದು. ಎಲ್ಲರನ್ನೂ ಪ್ರೀತಿಸಬೇಕು. ಎಲ್ಲ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ತುಂಬುವ ಕೆಲಸ ಮಾಡಬೇಕು. ಅದನ್ನು ನಮ್ಮ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>