ಸಿದ್ದರಾಮಯ್ಯ ಕೈ ಬಿಟ್ಟರೆ ಈಗಲೂ ಪಕ್ಷ ಮುಳುಗುತ್ತೆ. ಸದ್ಯ ಕಾಂಗ್ರೆಸ್ ಅನ್ನು ಶೇಕಡಾ 70ಕ್ಕೆ ತಂದು ನಿಲ್ಲಿಸಿದ್ದಾರೆ. ಈ ವಿಚಾರವನ್ನು ನೇರವಾಗಿಯೇ ಹೇಳುತ್ತೇನೆ. ರಾಜ್ಯದಲ್ಲಿ ನಿತ್ಯ ನೂರಾರು ಜನರು ಕೋವಿಡ್ನಿಂದ ಮೃತಪಡುತ್ತಿದ್ದಾರೆ. ಜನರ ಜೀವ ಉಳಿಸುವ ಕಡೆ ಗಮನ ಹರಿಸುವ ಬದಲು ಪ್ರಚಾರಕ್ಕಾಗಿ ನಿತ್ಯ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.ಪ್ರತಿಭಟನೆ ಮಾಡಿದ ತಕ್ಷಣ ಪ್ರಧಾನಿ ನರೇಂದ್ರ ಮೋದಿ ಮತ್ತು ಸಿ.ಎಂ ಯಡಿಯೂರಪ್ಪ ಅಧಿಕಾರದಿಂದ ಕೆಳಗೆ ಇಳಿಯುತ್ತಾರಾ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.