ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೌಡರ ಹೆಗಲ ಮೇಲೆ ಕುಳಿತು ಡಿಸಿಎಂ ಆಗಿದ್ದ ಸಿದ್ದರಾಮಯ್ಯ

Last Updated 5 ಅಕ್ಟೋಬರ್ 2020, 12:30 IST
ಅಕ್ಷರ ಗಾತ್ರ

ಹಾಸನ: ಎಚ್‌.ಡಿ.ದೇವೇಗೌಡರ ಹೆಗಲ ಮೇಲೆ ಕುಳಿತು ಸಿದ್ದರಾಮಯ್ಯ ಉಪಮುಖ್ಯಮಂತ್ರಿಯಾಗಿದ್ದು ಎಂಬುದನ್ನು ನೆನಪು ಮಾಡಿಕೊಳ್ಳಬೇಕುಎಂದು ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿರುಗೇಟು ನೀಡಿದರು.

‘ಜೆಡಿಎಸ್‌ ಒಂದು ರಾಜಕೀಯ ಪಕ್ಷವೇ ಅಲ್ಲ ಎಂಬ ಲಘುವಾದ ಹೇಳಿಕೆ ನೀಡುವುದನ್ನು ನಿಲ್ಲಿಸಬೇಕು.ಸಮ್ಮಿಶ್ರ ಸರ್ಕಾರ ನಡೆಸಲು ಜೆಡಿಎಸ್‌ ಯಾರ ಬಳಿಯೂ ಹೋಗಿರಲಿಲ್ಲ. ಕಾಂಗ್ರೆಸ್‌ನವರೇ ನಮ್ಮ ಬಳಿ ಬಂದಿದ್ದರು. ಎಚ್‌.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದರೂ ಅಧಿಕಾರ ನಡೆಸಿದ್ದು ಕಾಂಗ್ರೆಸ್‌. ನಾವು ಅವರ ಹೆಗಲ ಮೇಲೆ ಕುಳಿತು ಅಧಿಕಾರ ಮಾಡಿಲ್ಲ. ಅವರೇ ನಮ್ಮ ಹೆಗಲ ಮೇಲೆ ಕುಳಿತು ಅಧಿಕಾರ ಮಾಡಿದರು’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

‘ಭಾವನಾತ್ಮಕ ಜೀವನ ನಡೆಸುವ ಕುಮಾರಸ್ವಾಮಿಗೆ ಜನರ ನೋವು ಕಂಡಾಗ ಕಣ್ಣೀರು ಬರುವುದು ಸಹಜ.
ಕಠಿಣ ಹೃದಯ ಹೊಂದಿರುವವರಿಗೆ ಬಡವರ ಭಾವನೆಗಳು ಅರ್ಥವಾಗುವುದಿಲ್ಲ’ಎಂದು ಟೀಕಿಸಿದರು.

ಶಿರಾ ಮತ್ತು ಆರ್.ಆರ್‌ .ನಗರ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು. ಈಗಾಗಲೇ ಕ್ಷೇತ್ರದಲ್ಲಿ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹಿಸಲಾಗಿದೆ. ಎರಡು ದಿನದಲ್ಲಿ ಹೆಸರು ಪ್ರಕಟಿಸಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT