ಹೊಳೆನರಸೀಪುರ (ಹಾಸನ ಜಿಲ್ಲೆ): ಹಾಸನ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೇಯಸ್ ಎಂ. ಪಟೇಲ್ ಅವರ ನಿವಾಸಕ್ಕೆ ಶುಕ್ರವಾರ ಎಸ್ಐಟಿ ತಂಡ ಭೇಟಿ ನೀಡಿದೆ.
ವಕೀಲ ದೇವರಾಜೇಗೌಡ ಅವರು ಸುದ್ದಿಗೋಷ್ಠಿ ನಡೆಸಿ, ‘ಶ್ರೇಯಸ್ ಎಂ. ಪಟೇಲ್ ಅವರು ಕಾರ್ತಿಕ್ನನ್ನು ಹಾಸನದ ಹೋಟೆಲ್ನಲ್ಲಿ ಭೇಟಿ ಮಾಡಿದ್ದರು’ ಎಂದು ಆರೋಪಿಸಿದ್ದರು. ಈ ಆರೋಪವನ್ನು ಶ್ರೇಯಸ್ ಪಟೇಲ್ ನಿರಾಕರಿಸಿದ್ದರು. ಈ ಮಧ್ಯೆ ಪೆನ್ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೇಯಸ್ ಪಟೇಲ್ ಅವರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಭೇಟಿ ನೀಡಿದ್ದರು ಎಂದು ತಿಳಿದುಬಂದಿದೆ. ಪಟ್ಟಣದ ಕಾಂಗ್ರೆಸ್ ಮುಖಂಡರೊಬ್ಬರು ತಲೆಮರೆಸಿಕೊಂಡಿದ್ದು, ಈ ಬಗ್ಗೆ ಶ್ರೇಯಸ್ ಅವರ ವಿಚಾರಣೆ ನಡೆಸಿರಬಹುದು ಎನ್ನಲಾಗಿದೆ.