‘ನಗರಾಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ಗೃಹಮಂಡಳಿ, ಕೆಇಬಿ, ಅರಣ್ಯ ಇಲಾಖೆ, ತೋಟಗಾರಿಕೆ ಹಾಗೂ ಪರಿಸರ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದಾರೆ. ನಿಯಮ ಬಾಹಿರ ನಿವೇಶನಗಳಿಗೆ ಕಡಿವಾಣ ಹಾಕದಿದ್ದರೆ ಹುಡಾ ಹಾಗೂ ಹೌಸಿಂಗ್ ಬೋರ್ಡ್ ಬಾಗಿಲು ಮುಚ್ಚುವುದು ಒಳ್ಳೆಯದು. ಜಿಲ್ಲೆಯಲ್ಲಿ ಇದರ ದಂಧೆ ನಡೆಯುತ್ತಿದೆ, ಈ ಬಗ್ಗೆ ಮುಖ್ಯಮಂತ್ರಿ, ನಗರಾಭಿವೃದ್ಧಿ ಇಲಾಖೆ, ವಸತಿ ಸಚಿವ ಹಾಗೂ ಸಂಬಂಧ ಪಟ್ಟ ಇಲಾಖೆ ಮುಖ್ಯಕಾರ್ಯದರ್ಶಿ ಗಮನಕ್ಕೆ ತರಲಾಗುವುದು’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.