ಆರ್ಥಿಕವಾಗಿ ಹಿಂದುಳಿದಿರುವ ಮೇಲ್ಜಾತಿಯವರಿಗೆ ಕೇಂದ್ರ ಸರ್ಕಾರ ನೀಡಿರುವ ಶೇ 10 ರಷ್ಟು ಮೀಸಲು ಕುರಿತು ಪ್ರತಿಕ್ರಿಯಿಸಿದ ಗೌಡರು, ‘ಕೇಂದ್ರ ಸರ್ಕಾರದ ಜನಪ್ರಿಯತೆ ಕುಗ್ಗಿದೆ ಎಂಬುದಕ್ಕೆ ಇತ್ತೀಚೆಗೆ ನಡೆದ ಪಂಚರಾಜ್ಯಗಳ ಚುನಾವಣೆ ಫಲಿತಾಂಶ ಸಾಕ್ಷಿ. ಮುಂದಿನ ಚುನಾವಣೆಯಲ್ಲಿ ಮೇಲ್ವರ್ಗದ ಜನರನ್ನು ಓಲೈಸಿ, ಶತಾಯಗತಾಯ ಚುನಾವಣೆಯಲ್ಲಿ ಗೆಲ್ಲಲು ಮೀಸಲು ಅಸ್ರ್ತ ಬಳಸಿದ್ದಾರೆ. ಪ್ರತಿಪಕ್ಷಗಳೂ ಮರು ಮಾತನಾಡದೇ ಮಸೂದೆ ಪಾಸ್ ಆಗಲು ಸಹಕರಿಸಿದವು. ಇದರ ಅರ್ಥ ಎಲ್ಲರಿಗೂ ಚುನಾವಣೆಯಲ್ಲಿ ಅನುಕೂಲವಾಗಬೇಕು ಎಂಬುದೇ ಆಗಿದೆ’ ಎಂದು ನುಡಿದರು.