ಇಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಯಾರು ಸಮರ್ಥ ಅಭ್ಯರ್ಥಿ ಎನ್ನುವ ಪ್ರಶ್ನೆ ನಮ್ಮಲ್ಲಿದೆ. ಜನಾಭಿಪ್ರಾಯ ಸಂಗ್ರಹಿಸಿದ್ದೇವೆ. ಇಡೀ ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡ ಸಮರ್ಥರು ಎನ್ನುವ ಅಭಿಪ್ರಾಯ ಬರುತ್ತಿದೆ. ಎಲ್ಲರ ಪರವಾಗಿ ಅವರ ಹೆಸರನ್ನು ಸೂಚಿಸುತ್ತಿದ್ದೇನೆ’ ಎಂದು ತಿಳಿಸಿದರು.