<p><strong>ಕೊಣನೂರು</strong>: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಕೆ. ಕೃಷ್ಣ ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾದರು.</p>.<p>ಮಂಗಳವಾರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್.ಕೆ.ಕೃಷ್ಣ 7 ಮತಗಳನ್ನು ಮತ್ತು ಕೆ.ಆರ್.ಸುನಿಲ್ ಕುಮಾರ್ 6 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಕೆ.ಎನ್. ನಂಜುಂಡೇಗೌಡ 6 ಮತ್ತು ಬಿ.ಜೆ.ಮಂಜುಳಾ 7 ಮತಗಳನ್ನು ಪಡೆದರು. <br> ಚುನಾವಣಾಧಿಕಾರಿಯಾಗಿ ಡಿ.ಲೀಲಾ ಕಾರ್ಯನಿರ್ವಹಿಸಿದರು.</p>.<p>ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಎಸ್.ಕೆ.ಕೃಷ್ಣ, 6 ನೇ ಬಾರಿಗೆ ಅಧ್ಯಕ್ಷನಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಸಂಘದ ವತಿಯಿಂದ ಷೇರುದಾರರಿಗೆ ಹೆಚ್ಚು ಸಾಲ ನೀಡುವ ಉದ್ದೇಶವಿದ್ದು, ಸಂಘದ ಸದಸ್ಯರು ಮರಣ ಹೊಂದಿದಾಗ ಸಂಘದಿಂದ ನೀಡುತ್ತಿದ್ದ ₹3 ಸಾವಿರ ಅನ್ನು ₹5 ಸಾವಿರಕ್ಕೆ ಏರಿಸಲಾಗುವುದು ಎಂದರು.</p>.<p>ಸಂಘದ ವತಿಯಿಂದ ಶುದ್ಧ ಕುಡಿಯುವ ನೀರಿನ ಪ್ಯಾಕೇಜ್ ಘಟಕ, ಮನೆ ಬಳಕೆಯ ಎಲ್ಪಿಜಿ ಸಿಲಿಂಡರ್ ವಿತರಣಾ ಕೇಂದ್ರ ಪ್ರಾರಂಭಿಸಿ, ಸಂಘಕ್ಕೆ ಹೆಚ್ಚಿನ ಆದಾಯ ತರುವುದು ಗುರಿಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೊಣನೂರು</strong>: ಇಲ್ಲಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ಎಸ್.ಕೆ. ಕೃಷ್ಣ ಮತ್ತು ಉಪಾಧ್ಯಕ್ಷರಾಗಿ ಮಂಜುಳಾ ಆಯ್ಕೆಯಾದರು.</p>.<p>ಮಂಗಳವಾರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಎಸ್.ಕೆ.ಕೃಷ್ಣ 7 ಮತಗಳನ್ನು ಮತ್ತು ಕೆ.ಆರ್.ಸುನಿಲ್ ಕುಮಾರ್ 6 ಮತಗಳನ್ನು ಪಡೆದರು. ಉಪಾಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದ ಕೆ.ಎನ್. ನಂಜುಂಡೇಗೌಡ 6 ಮತ್ತು ಬಿ.ಜೆ.ಮಂಜುಳಾ 7 ಮತಗಳನ್ನು ಪಡೆದರು. <br> ಚುನಾವಣಾಧಿಕಾರಿಯಾಗಿ ಡಿ.ಲೀಲಾ ಕಾರ್ಯನಿರ್ವಹಿಸಿದರು.</p>.<p>ಬಳಿಕ ಮಾತನಾಡಿದ ನೂತನ ಅಧ್ಯಕ್ಷ ಎಸ್.ಕೆ.ಕೃಷ್ಣ, 6 ನೇ ಬಾರಿಗೆ ಅಧ್ಯಕ್ಷನಾಗಿ ಆಯ್ಕೆಯಾಗಲು ಸಹಕರಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಸಂಘದ ವತಿಯಿಂದ ಷೇರುದಾರರಿಗೆ ಹೆಚ್ಚು ಸಾಲ ನೀಡುವ ಉದ್ದೇಶವಿದ್ದು, ಸಂಘದ ಸದಸ್ಯರು ಮರಣ ಹೊಂದಿದಾಗ ಸಂಘದಿಂದ ನೀಡುತ್ತಿದ್ದ ₹3 ಸಾವಿರ ಅನ್ನು ₹5 ಸಾವಿರಕ್ಕೆ ಏರಿಸಲಾಗುವುದು ಎಂದರು.</p>.<p>ಸಂಘದ ವತಿಯಿಂದ ಶುದ್ಧ ಕುಡಿಯುವ ನೀರಿನ ಪ್ಯಾಕೇಜ್ ಘಟಕ, ಮನೆ ಬಳಕೆಯ ಎಲ್ಪಿಜಿ ಸಿಲಿಂಡರ್ ವಿತರಣಾ ಕೇಂದ್ರ ಪ್ರಾರಂಭಿಸಿ, ಸಂಘಕ್ಕೆ ಹೆಚ್ಚಿನ ಆದಾಯ ತರುವುದು ಗುರಿಯಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>