<p><strong>ನುಗ್ಗೇಹಳ್ಳಿ (ಹಾಸನ ಜಿಲ್ಲೆ):</strong> ಸಾಹಿತಿ ಎಸ್.ಎಲ್. ಭೈರಪ್ಪ ಅವರ ಚಿತಾಭಸ್ಮವನ್ನು, ಅವರ ಆಸೆಯಂತೆ ಹುಟ್ಟೂರಿನ ಸಂತೇಶಿವರ ಕೆರೆಯಲ್ಲಿ ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರ್ ಭಾನುವಾರ ವಿಸರ್ಜಿಸಿದರು.</p>.<p>ಶನಿವಾರ ಕಾವೇರಿ ನದಿಯಲ್ಲಿ ಸಂಪ್ರದಾಯದಂತೆ ಅಸ್ಥಿ ವಿಸರ್ಜನೆ ಮಾಡಿದ್ದ ಪುತ್ರರು, ಭೈರಪ್ಪನವರ ಕನಸಿನ ಯೋಜನೆಯಿಂದ ತುಂಬಿರುವ ಗ್ರಾಮದ ಕೆರೆಯಲ್ಲಿ ಗ್ರಾಮಸ್ಥರೊಂದಿಗೆ ಸೇರಿ ತೆಪ್ಪದಲ್ಲಿ ತೆರಳಿ ಅಸ್ಥಿ ವಿಸರ್ಜನೆ ನೆರವೇರಿಸಿದರು.</p>.<p>ಪುರೋಹಿತರಾದ ಪ್ರಭಾಕರ್ ಜೋಯಿಸ್, ಅನಂತರಾಮ ಜೋಯಿಸ್, ವೇಣುಗೋಪಾಲ್, ಎಸ್.ಡಿ. ನಾಗರಾಜ್ ರಾವ್ ಬ್ರಾಹ್ಮಣ ಸಂಪ್ರದಾಯದಂತೆ ಚಿತಾಭಸ್ಮಕ್ಕೆ ಪೂಜೆ ಸಲ್ಲಿಸಿದರು. ನಂತರ ಮಂತ್ರ, ವೇದ ಘೋಷ, ಶಾಂತಿ ಮಂತ್ರಗಳನ್ನು ಪಠಿಸಲಾಯಿತು.</p>.<p>ಚಿತಾಭಸ್ಮ ತಂದ ಉದಯಶಂಕರ್ ಅವರನ್ನು ಗ್ರಾಮಸ್ಥರು, ಪ್ರವೇಶದ್ವಾರದಲ್ಲೇ ಬರಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನುಗ್ಗೇಹಳ್ಳಿ (ಹಾಸನ ಜಿಲ್ಲೆ):</strong> ಸಾಹಿತಿ ಎಸ್.ಎಲ್. ಭೈರಪ್ಪ ಅವರ ಚಿತಾಭಸ್ಮವನ್ನು, ಅವರ ಆಸೆಯಂತೆ ಹುಟ್ಟೂರಿನ ಸಂತೇಶಿವರ ಕೆರೆಯಲ್ಲಿ ಪುತ್ರರಾದ ರವಿಶಂಕರ್ ಹಾಗೂ ಉದಯಶಂಕರ್ ಭಾನುವಾರ ವಿಸರ್ಜಿಸಿದರು.</p>.<p>ಶನಿವಾರ ಕಾವೇರಿ ನದಿಯಲ್ಲಿ ಸಂಪ್ರದಾಯದಂತೆ ಅಸ್ಥಿ ವಿಸರ್ಜನೆ ಮಾಡಿದ್ದ ಪುತ್ರರು, ಭೈರಪ್ಪನವರ ಕನಸಿನ ಯೋಜನೆಯಿಂದ ತುಂಬಿರುವ ಗ್ರಾಮದ ಕೆರೆಯಲ್ಲಿ ಗ್ರಾಮಸ್ಥರೊಂದಿಗೆ ಸೇರಿ ತೆಪ್ಪದಲ್ಲಿ ತೆರಳಿ ಅಸ್ಥಿ ವಿಸರ್ಜನೆ ನೆರವೇರಿಸಿದರು.</p>.<p>ಪುರೋಹಿತರಾದ ಪ್ರಭಾಕರ್ ಜೋಯಿಸ್, ಅನಂತರಾಮ ಜೋಯಿಸ್, ವೇಣುಗೋಪಾಲ್, ಎಸ್.ಡಿ. ನಾಗರಾಜ್ ರಾವ್ ಬ್ರಾಹ್ಮಣ ಸಂಪ್ರದಾಯದಂತೆ ಚಿತಾಭಸ್ಮಕ್ಕೆ ಪೂಜೆ ಸಲ್ಲಿಸಿದರು. ನಂತರ ಮಂತ್ರ, ವೇದ ಘೋಷ, ಶಾಂತಿ ಮಂತ್ರಗಳನ್ನು ಪಠಿಸಲಾಯಿತು.</p>.<p>ಚಿತಾಭಸ್ಮ ತಂದ ಉದಯಶಂಕರ್ ಅವರನ್ನು ಗ್ರಾಮಸ್ಥರು, ಪ್ರವೇಶದ್ವಾರದಲ್ಲೇ ಬರಮಾಡಿಕೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>