ರಾಡಿಮಯ ವಾತಾವರಣದಿಂದ ಇಲ್ಲಿನ ಅಂಗಡಿಯವರಿಗೆ ಮತ್ತು ಖರೀದಿಗೆ ಬರುವಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ. ಕೆಲವು ತಿಂಗಳ ಹಿಂದೆ ಕವರ್ಡಕ್ ಮೇಲಿನ ಮಾರುಕಟ್ಟೆ ಒಳಗೆ ಹೊಸದಾಗಿ ಡಾಂಬರು ಹಾಕಲಾಗಿತ್ತು. ಡಾಂಬರು ಕೆಲವೇ ದಿನಕ್ಕೆ ಕುಡಿಯುವ ನೀರಿನ ಪೈಪ್ಲೈನ್ ಅಳವಡಿಸಲು ರಸ್ತೆ ಅಗೆದರು. ಪೈಪ್ ಅಳವಡಿಸಿದ ನಂತರ ಗುಂಡಿಯನ್ನು ಸರಿಯಾಗಿ ಮುಚ್ಚದೆ ಬಿಟ್ಟಿದ್ದರಿಂದ ಈ ಸ್ಥಿತಿ ನಿರ್ಮಾಣವಾಗಿದೆ.