<p><strong>ಚನ್ನರಾಯಪಟ್ಟಣ:</strong> ಆಟೊ ಚಾಲಕರು ಸ್ಮಾರ್ಟ್ ಕಾರ್ಡ್ಗಳನ್ನು ಪಡೆದುಕೊಳ್ಳಬೇಕು ಎಂದು ಆಟೊ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ ಹೇಳಿದರು.</p>.<p>ಪಟ್ಟಣದ ಗಣಪತಿ ಪೆಂಡಾಲ್ನಲ್ಲಿ ಸೋಮವಾರ ಕಾರ್ಮಿಕ ಇಲಾಖೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಆಟೊ ಚಾಲಕರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ ಆಟೊ ಚಾಲಕರಿಗೆ ಸ್ಮಾರ್ಟ್ಕಾರ್ಡ್ ನೋಂದಣಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಈ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು. ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಮಾಡಿಸಬೇಕು. ಅಪಘಾತ ಸಂಭವಿಸಿದಾಗ ಪರಿಹಾರ ಸೌಲಭ್ಯ ದೊರೆಯುತ್ತದೆ. ಚಾಲಕರ ಮಕ್ಕಳಿಗೆ ಇಲಾಖೆಯಿಂದ ಶೈಕ್ಷಣಿಕ ಸಹಾಯಧನ ದೊರಕಲಿದೆ ಎಂದರು.</p>.<p>ಕಾರ್ಮಿಕ ನಿರೀಕ್ಷಕ ಡಿ.ಆರ್. ಪುಟ್ಟರಾಜು ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಒದಗಿಸಲಾಗುವುದು. ಪಟ್ಟಣದಲ್ಲಿ 1936 ಚಾಲಕರು ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಹಂತಹಂತವಾಗಿ ಎಲ್ಲಾ ಎಲ್ಲಾ ಚಾಲಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಅಸಂಘಟಿತ ಕಾರ್ಮಿಕರಿಗೆ ಸೇವಾಭದ್ರತೆ ಹಾಗೂ ಜೀವನ ಭದ್ರತೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆತಂದಿದೆ. ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಅಂಗವೈಕಲ್ಯಕ್ಕೆ ಒಳಗಾದರೆ ಅವಲಂಬಿತ ಕುಟುಂಬದವರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.</p>.<p>ಸಂಘದ ಗೌರವಾಧ್ಯಕ್ಷ ಕೋಟೆ ಚಂದ್ರಶೇಖರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಆಟೋಚಾಲಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿ ಸಂದೀಪ್, ನವೀನ್, ಶ್ರೀಧರ್, ಶಂಕರ್ ವೆಂಕಟಾಚಲ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚನ್ನರಾಯಪಟ್ಟಣ:</strong> ಆಟೊ ಚಾಲಕರು ಸ್ಮಾರ್ಟ್ ಕಾರ್ಡ್ಗಳನ್ನು ಪಡೆದುಕೊಳ್ಳಬೇಕು ಎಂದು ಆಟೊ ಮಾಲೀಕರು ಮತ್ತು ಚಾಲಕರ ಸಂಘದ ಅಧ್ಯಕ್ಷ ಮಂಜುನಾಥ ಹೇಳಿದರು.</p>.<p>ಪಟ್ಟಣದ ಗಣಪತಿ ಪೆಂಡಾಲ್ನಲ್ಲಿ ಸೋಮವಾರ ಕಾರ್ಮಿಕ ಇಲಾಖೆ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಆಟೊ ಚಾಲಕರ ಸಂಘದ ಸಹಯೋಗದಲ್ಲಿ ಏರ್ಪಡಿಸಿದ ಆಟೊ ಚಾಲಕರಿಗೆ ಸ್ಮಾರ್ಟ್ಕಾರ್ಡ್ ನೋಂದಣಿ ಶಿಬಿರದಲ್ಲಿ ಅವರು ಮಾತನಾಡಿದರು.</p>.<p>ಈ ಯೋಜನೆಯಡಿ ಹೆಸರು ನೋಂದಾಯಿಸಿಕೊಂಡು ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳುವ ಮೂಲಕ ಪ್ರಯೋಜನ ಪಡೆದುಕೊಳ್ಳಬೇಕು. ಚಾಲಕರು ಕಡ್ಡಾಯವಾಗಿ ಚಾಲನಾ ಪರವಾನಗಿ ಮತ್ತು ಬ್ಯಾಡ್ಜ್ ಮಾಡಿಸಬೇಕು. ಅಪಘಾತ ಸಂಭವಿಸಿದಾಗ ಪರಿಹಾರ ಸೌಲಭ್ಯ ದೊರೆಯುತ್ತದೆ. ಚಾಲಕರ ಮಕ್ಕಳಿಗೆ ಇಲಾಖೆಯಿಂದ ಶೈಕ್ಷಣಿಕ ಸಹಾಯಧನ ದೊರಕಲಿದೆ ಎಂದರು.</p>.<p>ಕಾರ್ಮಿಕ ನಿರೀಕ್ಷಕ ಡಿ.ಆರ್. ಪುಟ್ಟರಾಜು ಮಾತನಾಡಿ, ಅಸಂಘಟಿತ ಕಾರ್ಮಿಕರಿಗೆ ಸೌಲಭ್ಯ ಒದಗಿಸಲಾಗುವುದು. ಪಟ್ಟಣದಲ್ಲಿ 1936 ಚಾಲಕರು ಸ್ಮಾರ್ಟ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಹಂತಹಂತವಾಗಿ ಎಲ್ಲಾ ಎಲ್ಲಾ ಚಾಲಕರಿಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.</p>.<p>ಅಸಂಘಟಿತ ಕಾರ್ಮಿಕರಿಗೆ ಸೇವಾಭದ್ರತೆ ಹಾಗೂ ಜೀವನ ಭದ್ರತೆಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆತಂದಿದೆ. ಕಾರ್ಮಿಕರು ಅಪಘಾತದಲ್ಲಿ ಮೃತಪಟ್ಟರೆ ಅಥವಾ ಅಂಗವೈಕಲ್ಯಕ್ಕೆ ಒಳಗಾದರೆ ಅವಲಂಬಿತ ಕುಟುಂಬದವರಿಗೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.</p>.<p>ಸಂಘದ ಗೌರವಾಧ್ಯಕ್ಷ ಕೋಟೆ ಚಂದ್ರಶೇಖರ್, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಆಟೋಚಾಲಕರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿ ಸಂದೀಪ್, ನವೀನ್, ಶ್ರೀಧರ್, ಶಂಕರ್ ವೆಂಕಟಾಚಲ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>