<p><strong>ಹೊಳೆನರಸೀಪುರ</strong>: ಪಟ್ಟಣದ ಸೋಷಿಯಲ್ ಕ್ಲಬ್ ನೂತನ ಅಧ್ಯಕ್ಷರಾಗಿ ಉದ್ಯಮಿ ಕೆ.ಎಂ. ಹೊನ್ನಪ್ಪ ಆಯ್ಕೆ ಆಗಿದ್ದಾರೆ.</p>.<p>ಇತ್ತೀಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಕಾರ್ಯದರ್ಶಿಯಾಗಿ ಕೆ.ಎ. ಸುದರ್ಶನ್ಬಾಬು, ಖಜಾಂಚಿಯಾಗಿ ವಿಜಯಕುಮಾರ್ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ ಎಂದು ಅಧ್ಯಕ್ಷ ಹೊನ್ನಪ್ಪ ತಿಳಿಸಿದ್ದಾರೆ.</p>.<p>ನಮ್ಮ ಕ್ಲಬ್ ಆರಂಭದ ದಿನದಿಂದ ಅನೇಕ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದೆ. ಪ್ರತಿವರ್ಷ ಸ್ವಾತಂತ್ರ್ಯೋತ್ಸವ ಕಾಯಕ್ರಮದಲ್ಲಿ ಭಾಗವಹಿಸುವ ಸಾವಿರಾರು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಅಧಿಕಾರಿಗಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಸೇವೆಯನ್ನು ಮುಂದುವರಿಸುತ್ತೇವೆ. ಇದೇ ರೀತಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಕ್ಲಬ್ ಸದಸ್ಯರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಹೊಸವರ್ಷ ಆಚರಣೆಯ ಕಾರ್ಯಕ್ರಮಗಳನ್ನು ಮುಂದುವರಿಸುವುದರ ಜೊತೆಗೆ ಈ ಬಾರಿ ಕ್ರೀಡೆಗೆ ಹೆಚ್ಚಿನ ಪ್ರೋತಾಹ ನೀಡುವ ಕಾಯಕ್ರಮಗಳನ್ನು ಸದಸ್ಯರ ಅಭಿಪ್ರಾಯ ಪಡೆದು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೊಳೆನರಸೀಪುರ</strong>: ಪಟ್ಟಣದ ಸೋಷಿಯಲ್ ಕ್ಲಬ್ ನೂತನ ಅಧ್ಯಕ್ಷರಾಗಿ ಉದ್ಯಮಿ ಕೆ.ಎಂ. ಹೊನ್ನಪ್ಪ ಆಯ್ಕೆ ಆಗಿದ್ದಾರೆ.</p>.<p>ಇತ್ತೀಚೆಗೆ ನೂತನ ಪದಾಧಿಕಾರಿಗಳ ಆಯ್ಕೆ ನಡೆದಿದ್ದು ಕಾರ್ಯದರ್ಶಿಯಾಗಿ ಕೆ.ಎ. ಸುದರ್ಶನ್ಬಾಬು, ಖಜಾಂಚಿಯಾಗಿ ವಿಜಯಕುಮಾರ್ ಸರ್ವಾನುಮತದಿಂದ ಆಯ್ಕೆ ಆಗಿದ್ದಾರೆ ಎಂದು ಅಧ್ಯಕ್ಷ ಹೊನ್ನಪ್ಪ ತಿಳಿಸಿದ್ದಾರೆ.</p>.<p>ನಮ್ಮ ಕ್ಲಬ್ ಆರಂಭದ ದಿನದಿಂದ ಅನೇಕ ಸಮಾಜ ಸೇವಾ ಕಾರ್ಯಗಳನ್ನು ಮಾಡುತ್ತಿದೆ. ಪ್ರತಿವರ್ಷ ಸ್ವಾತಂತ್ರ್ಯೋತ್ಸವ ಕಾಯಕ್ರಮದಲ್ಲಿ ಭಾಗವಹಿಸುವ ಸಾವಿರಾರು ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ, ಅಧಿಕಾರಿಗಳಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗುತ್ತಿದೆ. ಈ ಸೇವೆಯನ್ನು ಮುಂದುವರಿಸುತ್ತೇವೆ. ಇದೇ ರೀತಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳಿಸಿದ ಕ್ಲಬ್ ಸದಸ್ಯರ ಮಕ್ಕಳ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ, ಹೊಸವರ್ಷ ಆಚರಣೆಯ ಕಾರ್ಯಕ್ರಮಗಳನ್ನು ಮುಂದುವರಿಸುವುದರ ಜೊತೆಗೆ ಈ ಬಾರಿ ಕ್ರೀಡೆಗೆ ಹೆಚ್ಚಿನ ಪ್ರೋತಾಹ ನೀಡುವ ಕಾಯಕ್ರಮಗಳನ್ನು ಸದಸ್ಯರ ಅಭಿಪ್ರಾಯ ಪಡೆದು ಆಯೋಜಿಸಲಾಗುವುದು ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>