ಜನ ಜಾಗೃತಿ ಆಂದೋಲನ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಬಿ.ಎ. ಪರಮೇಶ್ ಮಾತನಾಡಿ, ಎಚ್ಐವಿ ಸೋಂಕಿತರನ್ನು ಕಳಂಕಿತ ರೂಪದಲ್ಲಿ ಕಾಣದೆ ಸೂಕ್ಷ್ಮವಾಗಿ ಪರಿಗಣಿಸಿ, ಮಾನಸಿಕ ಸ್ಥೈರ್ಯ ಹೆಚ್ಚಿಸುವ ಕೆಲಸ ಮಾಡಬೇಕು. ವೈದ್ಯರು ಸಹ ಸೋಂಕಿತರಿಗೆ ಸಂಯಮದಿಂದ ಚಿಕಿತ್ಸೆ ನೀಡಬೇಕು. ಅವರಲ್ಲಿನ ಕೀಳಿರಿಮೆ ತೊಡೆದು ಹಾಕಿ ಸಮಾಜದಲ್ಲಿ ಮುಕ್ತವಾಗಿ ಬದುಕುವಂತೆ ಮಾಡಬೇಕು ಎಂದು ಹೇಳಿದರು.