ಕುವೈತ್ ನಿಂದಲೂ ಒಬ್ಬ ಮಹಿಳೆ ಹಾಸನದ ಭೂ ಸಮಸ್ಯೆ ಬಗ್ಗೆ ಕರೆ ಮಾಡಿ ಸ್ಪಂದನ ತಂತ್ರಾಶದ ಉಪಯೋಗ ಪಡೆದಿದ್ದಾರೆ. ‘ಸ್ಪಂದನ’ದಲ್ಲಿ ದೂರು ದಾಖಲಾದ, ಪರಿಶೀಲನೆ ಮತ್ತು ಇತ್ಯರ್ಥವಾಗುವ ಹಂತದ ಮಾಹಿತಿಯು ದೂರುದಾರರ ಮೊಬೈಲ್ ನಂಬರ್ಗೆ ಸಂದೇಶ ರವಾನೆಯಾಗುತ್ತದೆ. ಈ ತಂತ್ರಾಂಶಕ್ಕೆ ಸಹಕರಿಸಿದ ಸಾರ್ವಜನಿಕ ಹಾಗೂ ಎಲ್ಲಾ ಇಲಾಖಾ ಅಧಿಕಾರಿಗಳ ಸ್ಪಂದನೆಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಅರ್ಜಿಗಳಲ್ಲಿ ಹೆಚ್ಚಿನವು ಕಂದಾಯ ಇಲಾಖೆ, ಪೋಲೀಸ್ ಇಲಾಖೆ ಹಾಗೂ ಜಿಲ್ಲಾ ಪಂಚಾಯಿತಿ ಇಲಾಖೆಗಳಿಗೆ ಸೇರಿದ್ದಾಗಿವೆ ಎಂದು ಹೇಳಿದರು.